ಮಾ.30ರಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಸುಳ್ಯ ಭೇಟಿ : ಚುನಾವಣಾ ಕಚೇರಿ ಉದ್ಘಾಟನೆ

0

ಕಾಂಗ್ರೆಸ್ ಸರಕಾರ ‌ಜನರಿಗೆ ಆರ್ಥಿಕ ಶಕ್ತಿ ನೀಡಿದೆ : ಈ ಬಾರಿ ಮತದಾರರು ನಮ್ಮನ್ನು ಬೆಂಬಲಿಸುತ್ತಾರೆ : ನಾಯಕರ ವಿಶ್ವಾಸ

ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ರವರು ಮಾ.30ರಂದು ಸುಳ್ಯಕ್ಕೆ ಭೇಟಿ ನೀಡಲಿದ್ದು, ಸುಳ್ಯದ ಸುಳ್ಯ ಸೆಂಟರ್ ನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಹೇಳಿದರು.

ಮಾ.28ರಂದು ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾರ್ಯಕ್ರಮದ ವಿವರ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ವಿದ್ಯಾವಂತರು, ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದಾರೆ. ಮಾಜಿ ಸಚಿವ ಜನಾರ್ದನ ಪೂಜಾರಿ ಯವರ ಶಿಷ್ಯ. ಬೆಳದಿಂಗಳು ಚಾರಿಟೇಬಲ್ ಟ್ರಸ್ಟ್ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡವರು ಎಂದು ಹೇಳಿದರು. ಮಾ.30ರಂದು‌ ಬೆಳಗ್ಗೆ 8 ಗಂಟೆಗೆ ಸುಳ್ಯಕ್ಕೆ ಬರುವ ಪದ್ಮರಾಜರು ಸುಳ್ಯದ ಚೆನ್ನಕೇಶವ ದೇವಸ್ಥಾನ, ಕಲ್ಕುಡ ದೈವಸ್ಥಾನ, ಮೊಗರ್ಪಣೆ ಮಸೀದಿ, ಸುಳ್ಯ ಸೈಂಟ್ ಬ್ರಿಜಿಡ್ಸ್ ಚರ್ಚ್ ಹಾಗೂ ಕೆ.ವಿ.ಜಿ. ವಿದ್ಯಾಸಂಸ್ಥೆಗಳಿಗೆ ಭೇಟಿ‌ ನೀಡಲಿದ್ದಾರೆ. ಪೂ.11 ಗಂಟೆಗೆ ಸುಳ್ಯ‌ ಸೆಂಟರ್ ನಲ್ಲಿ ಕಾಂಗ್ರೆಸ್ ಚುನಾವಣಾ ‌ಕಚೇರಿ ಉದ್ಘಾಟನೆ ಆಗಲಿದೆ. ಕಾಂಗ್ರೆಸ್ ‌ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಚುನಾವಣಾ ಉಸ್ತುವಾರಿ ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆಗಮಿಸಲಿದ್ದಾರೆ ಎಂದವರು ಹೇಳಿದರು.

ಲೋಕಸಭಾ ಚುನಾವಣಾ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಎನ್.ಜಯಪ್ರಕಾಶ್ ರೈ ಮಾತನಾಡಿ, “ಚುನಾವಣೆಗೆ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಕಾರ್ನಾರ್ ಸಭೆಗಳು, ಜಿ.ಪಂ. ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲಸ ಕಾರ್ಯಗಳು ಆರಂಭವಾಗಿದೆ. ಎ.3ರಂದು ನಮ್ಮ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದು ಅಂದಿನಿಂದ ಪ್ರಚಾರ ಕಾರ್ಯಕ್ಕೆ ವೇಗ ನೀಡಲಿದ್ದೇವೆ” ಎಂದು‌ ಹೇಳಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ. ಭರತ್ ಮುಂಡೋಡಿ ಮಾತನಾಡಿ “ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನುಡಿದಂತೆ ನಡೆದುಕೊಂಡಿದೆ. ಸರಕಾರದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ನೀಡಲಿದೆ. ಸರಕಾರದ 5 ಗ್ಯಾರಂಟಿ ಯೋಜನೆಗಳು ಕೂಡಾ ಮಧ್ಯವರ್ತಿ ಗಳಿಲ್ಲದೆ ನೇರವಾಗಿ ಫಲಾನುಭವಿಗಳ ಖಾತೆಗೆ ಬೀಳುತ್ತಿದೆ. ಆ ಮೂಲಕ ಕಾಂಗ್ರೆಸ್ ಜನರಿಗೆ ಬದುಕು ಕೊಟ್ಟಿದೆ. ಬದುಕು ಕೊಟ್ಟಿರುವ ಕಾಂಗ್ರೆಸ್ ಪಕ್ಷಕ್ಕೆ ಜನ ಮತ ಕೊಡುತ್ತಾರೋ ಅಥವಾ ಭಾವನಾತ್ಮಕ ವಿಚಾರಗಳ ಮೂಲಕ ಜನರನ್ನು ಕೆರಳಿಸುವ ಬಿಜೆಪಿಗೆ ಬೆಂಬಲ ಕೊಡುತ್ತಾರೋ. ಭಾವನಾತ್ಮಕ ವಿಚಾರದಿಂದ ಬದುಕು ಕಟ್ಟಲು ಸಾಧ್ಯವಿಲ್ಲ. ಬದುಕು ಕಟ್ಟಬೇಕಾದರೆ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬೇಕು. ಆರ್ಥಿಕ ಶಕ್ತಿ ನೀಡಿರುವುದು ಕಾಂಗ್ರೆಸ್. ಇದರ ಆಧಾರದ ಮೇಲೆ ನಾವು ಮತ ಯಾಚಿಸುತ್ತೇವೆ ಎಂದು ಅವರು ಹೇಳಿದರು.

ಈ ಭಾಗದಲ್ಲಿ ಕಳೆದ ಹಲವಾರು ವರ್ಷಗಳಿಂದ ಗ್ರಾ.ಪಂ., ತಾ.ಪಂ., ಜಿ.ಪಂ., ಎಂಎಲ್ ಎ, ಎಂಪಿ ಎಲ್ಲವೂ ಬಿಜೆಪಿ ಯವರೇ ಇದ್ದಾರೆ. ಆದರೆ ಅವರು ಮಾಡಿರುವ ಸಾಧನೆ ಏನು?. ಬಿಜೆಪಿ ಅಭಿವೃದ್ಧಿ ಶೀಲತೆಯ ಕೆಲಸದ ಬಗ್ಗೆ ಚಿಂತನೆ ಮಾಡೋದಿಲ್ಲ. ಇದು ಜನರು ತಿಳಿದುಕೊಂಡಿದ್ದಾರೆ. ಈ ಬಾರಿ ಖಂಡಿತವಾಗಿ ಜನರು ಕಾಂಗ್ರೆಸ್ ಬೆಂಬಲಿಸುತ್ತಾರೆ. ಸರಕಾರದ ಯೋಜನೆಗೆ ಕೃತಜ್ಞತೆ ಯಾಗಿ ಮತ ನೀಡುತ್ತಾರೆಂಬ ವಿಶ್ವಾಸ ನಮಗಿದೆ ಎಂದು ಹೇಳಿದರು.

ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕೃಷ್ಣಪ್ಪ ಜಿ, ಸುಳ್ಯ‌ಬ್ಲಾಕ್ ಉಸ್ತುವಾರಿ ಸರ್ವೋತ್ತಮ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಕೆ.ಎಂ.ಮುಸ್ತಫ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್, ಕೆಪಿಸಿಸಿ ಸದಸ್ಯೆ ಸರಸ್ವತಿಯ ಕಾಮತ್, ಪ್ರಮುಖರಾದ ರಾಧಾಕಾರಷ್ಣ ಬೊಳ್ಳೂರು, ಎಸ್.ಸಂಶುದ್ದಿನ್, ರಂಜಿತ್ ರೈ ಮೇನಾಲ, ಶಾಫಿ ಕುತ್ತಮೊಟ್ಟೆ, ರಾಜು ಪಂಡಿತ್, ಪ್ರವೀಣ ಮರುವಂಜ, ಸುಜಯ ಕೃಷ್ಣ, ಕುಶಾಲಪ್ಪ ನೆಲ್ಯಾಡಿ, ದೀಕ್ಷಿತ್ ನೆಲ್ಯಾಡಿ, ಜಗದೀಶ್ ಕೆರೆಕ್ಕೋಡಿ ಇದ್ದರು.