ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಆಗಮಿಸಿ, ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ . ಆರ್

0

ಸುಳ್ಯ: ಚುನಾವಣಾ ಪ್ರಚಾರಕ್ಕಾಗಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಮಾ. 30ರಂದು ಸುಳ್ಯಕ್ಕೆ ಅಗಮಿಸಿದ್ದು, ಬೆಳಿಗ್ಗೆ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪ್ರಚಾರ ಆರಂಭಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಕ್ಷೇತ್ರದ ಡಿಸಿಸಿ ಉಸ್ತುವಾರಿ ಎನ್.ಜಯಪ್ರಕಾಶ್ ರೈ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಪ್ರಮುಖರಾದ ರಾಧಾಕೃಷ್ಣ ಬೊಳ್ಳೂರು, ಕಿರಣ್ ಬುಡ್ಲೆಗುತ್ತು, ವಿಜಯ ಕುಮಾರ್ ಸೊರಕೆ, ಡಾ. ಎನ್.ಎ. ಜ್ಞಾನೇಶ್, ಮಹಮ್ಮದ್ ಕುಂಞಿ ಗೂನಡ್ಕ, ಕೆ.ಎಂ.ಮುಸ್ತಫ, ಶಾಹುಲ್ ಹಮೀದ್ ಕುತ್ತಮೊಟ್ಟೆ, ಪಿ.ಎ.ಮಹಮ್ಮದ್, ರಾಜು ಪಂಡಿತ್, ರಂಜಿತ್ ರೈ ಮೇನಾಲ, ಇಸ್ಮಾಯಿಲ್ ಪಡ್ಪಿನಂಗಡಿ, ಸಂಶುದ್ದೀನ್, ಮಹಮ್ಮದ್ ಫವಾಝ್, ಕೇಶವ ಮೊರಂಗಲ್ಲು, ಅಶೋಕ್ ಚೂಂತಾರು, ಧೀರಾ ಕ್ರಾಸ್ತಾ ಮತ್ತಿತರರು ಉಪಸ್ಥಿತರಿದ್ದರು.