ಅರ್ಗುಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶ, ವಿಜೃಂಭಿಸಿದ ಕುಣಿತ ಭಜನೆ

0

ಬಳ್ಪ ಗ್ರಾಮದ ಅರ್ಗುಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶ ಮಹೋತ್ಸವ ಮಾ.‌ 30ರಿಂದ ಏ. 4ರ ತನಕ ನಡೆಯಲಿದ್ದು, ಎ. 2ರಂದು ಸಂಜೆ ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆ, ಬಳಿಕ ಸುಬ್ರಹ್ಮಣ್ಯ ಕುಮಾರ ಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳಿಂದ ನಾಟಕ ಕುಹೂ ಕುಹೂ ಕೋಗಿಲೆ, ಕಲಾಮಂದಿರ್ ಬೆಳ್ಳಾರೆ ಇವರಿಂದ ನೃತ್ಯ ಸಂಭ್ರಮ ನಡೆಯಿತು.

ಇಂದು ವಿವಿಧ ವೈದಿಕ ಕಾರ್ಯಗಳು, ಸಂಜೆ 6.00ರಿಂದ ಭಜನಾ ಸಂಕೀರ್ತನೆ, ಸಂಜೆ 7.00ರಿಂದ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಬಯಲಾಟ ಗಜೇಂದ್ರ ಮೋಕ್ಷ ನಡೆಯಲಿದೆ.

ನಾಳೆ ಬೆಳಿಗ್ಗೆ ಮಹಾಗಣಪತಿ ಹೋಮ ಬಳಿಕ 9.40ರಿಂದ 10.30ರ ವರೆಗೆ ನಡೆಯುವ ವೃಷಭ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ಸದಾಶಿವ ದೇವರಿಗೆ ಅಷ್ಟಬಂಧ ಕ್ರಿಯೆ, ಕಲಶಾಭಿಷೇಕ ನಡೆಯಲಿದೆ.

ಬ್ರಹ್ಮ ಕಲಶೋತ್ಸವ ಸಂದರ್ಭದಲ್ಲಿ ಪ್ರತೀದಿನ ಮಧ್ಯಾಹ್ನ ಮತ್ತು ರಾತ್ರಿ ಮಹಾಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.