ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆ

0

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ಕಾಲಾವಧಿ ಜಾತ್ರೋತ್ಸವವು ಎ.13ರಿಂದ ಎ.20ರವರೆಗೆ ಜರುಗಲಿದ್ದು, ಜಾತ್ರೋತ್ಸವದ ಪೂರ್ವಭಾವಿ ಸಭೆಯು ಎ.5ರಂದು ಬೆಳಿಗ್ಗೆ ಜರುಗಿತು.

ಜಾತ್ರೋತ್ಸವದ ಆರ್ಥಿಕ ಸಮಿತಿ ಸಂಚಾಲಕ ಸಂತೋಷ್ ಕುತ್ತಮೊಟ್ಟೆ ಅವರು ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಜಾತ್ರೋತ್ಸವಕ್ಕೆ ಆರ್ಥಿಕ ಕ್ರೋಡೀಕರಣ, ಸಿದ್ಧತಾ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರುಗಳಾದ ಕಿಶೋರ್ ಉಳುವಾರು, ಕೇಶವ ಕೊಳಲುಮೂಲೆ, ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಉಮಾಶಂಕರ್ ಅಡ್ಯಡ್ಕ, ದೇವಳದ ಕಛೇರಿ ವ್ಯವಸ್ಥಾಪಕ ಆನಂದ ಕಲ್ಲಗದ್ದೆ, ಜೀರ್ಣೋದ್ಧಾರ ಸಮಿತಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.