ಎ.11 – 12: ಕಾಯರ್ತೋಡಿ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 20ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ

0

ಕಾಯರ್ತೋಡಿಯ ವಿಷ್ಣುಸರ್ಕಲ್ ಬಳಿಯಿರುವ ಶ್ರೀ ವರದಾಯಿನಿ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ 20ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಎ.11 ಮತ್ತು 12ರಂದು ಜರುಗಲಿದೆ.

ಎ.11ರಂದು ಸಂಜೆಯಿಂದ ರಾತ್ರಿಯವರೆಗೆ ನಾಮಾರ್ಚನೆ – ಭಜನೆ, ಬಳಿಕ ದೀಪಾರಾಧನೆ, ಶ್ರೀ ದುರ್ಗಾ ನಮಸ್ಕಾರ ಪೂಜೆ, ರಾತ್ರಿ ಅನ್ನಸಂತರ್ಪಣೆ ಜರುಗಲಿದೆ.

ಎ.12ರಂದು ಬೆಳಿಗ್ಗೆ ಗಣಪತಿ ಹವನ, ಗುರುಪೂಜೆ, ನವಕಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.