ಸುಳ್ಯ ಯೋಜನಾಧಿಕಾರಿ ನಾಗೇಶ್ ಪಿ. ಯವರಿಗೆ ಭದ್ರಾವತಿಗೆ ವರ್ಗಾವಣೆ

0

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ
ಸುಳ್ಯ ತಾಲೂಕಿನ ಯೋಜನಾಧಿಕಾರಿ ನಾಗೇಶ್ ಪಿ.ಯವರಿಗೆ ಭದ್ರಾವತಿ ತಾಲೂಕಿಗೆ ವರ್ಗಾವಣೆಗೊಂಡಿರುವುದಾಗಿ ತಿಳಿದು ಬಂದಿದೆ. ಇವರುಕಡಬ ತಾಲೂಕಿನ ಪುದ್ದೊಟ್ಟುಬೈಲಿನವರಾಗಿದ್ದು ದ.ಕ ಜಿಲ್ಲೆಯ ಮಂಗಳೂರಿನಲ್ಲಿ ಒಂದೂವರೆ ವರ್ಷ ಹಾಗೂ ಪ್ರಸ್ತುತ ಸುಳ್ಯದಲ್ಲಿ ಕಳೆದ ಒಂದು ವರ್ಷ ಎಂಟು ತಿಂಗಳ ಕಾಲ ಸೇವೆಯನ್ನು ಸಲ್ಲಿಸಿದ್ದರು.
ಭದ್ರಾವತಿ ತಾಲೂಕಿನಲ್ಲಿ ಯೋಜನಾಧಿಕಾರಿಯಾಗಿ ಕರ್ತವ್ಯದಲ್ಲಿರುವ ಬೆಳ್ತಂಗಡಿ ತಾಲೂಕಿನ ಉಜಿರೆಯ ಮಾಧವ ರವರು ಸುಳ್ಯಕ್ಕೆ ಬರಲಿದ್ದಾರೆ.