ಬೆಳ್ಳಾರೆ ಅಜಪಿಲ‌ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲ

0

ಬೆಳ್ಳಾರೆಯ ಅಜಪಿಲ‌ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಏ. 7-8 ರಂದು ನಡೆಯಿತು.
ಏ. 7ರಂದು ಸಂಜೆ ಭಂಡಾರ ತೆಗೆದು ಬಳಿಕ ಮೇಲೇರಿಗೆ ಅಗ್ನಿಸ್ಪರ್ಶ ನಡೆಯಿತು. ರಾತ್ರಿ ಅನ್ನ ಸಂತರ್ಪಣೆ ಬಳಿಕ ರಾತ್ರಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಕುಳಿಚಟ್ಟು ನಡೆಯಿತು. ಬಳಿಕ ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಬೆಳ್ತಂಗಡಿ ಇವರಿಂದ ಯಕ್ಷಗಾನ ಬಯಲಾಟ ಅಜ್ಜನ ಪಜ್ಜೆ ನಡೆಯಿತು. ಏ. 8 ರಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ, ಶ್ರೀ ಮಹಾಲಿಂಗೇಶ್ವರ ದೇವರ ಭೇಟಿ ನಂತರ ಮಾರಿಕಳ ನಡೆದು ಪ್ರಸಾದ ವಿತರಣೆ ಬಳಿಕ ಮುಳ್ಳು ಗುಳಿಗನ ಕೋಲ ನಡೆಯಿತು.