ಅರಂತೋಡು ಸ.ಹಿ.ಪ್ರಾ. ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಶಾರದಾರಿಗೆ ಬೀಳ್ಕೊಡುಗೆ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮ

0

ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ಶಾರದಾ ಕೆ. ಅವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಶಾಲೆಯ ದಿ.ಯು.ಡಿ. ಶೇಖರ್ ಸ್ಮರಣಾರ್ಥ ಸಭಾ ವೇದಿಕೆಯಲ್ಲಿ ಎ.8ರಂದು ಜರುಗಿತು.

ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಸುರೇಶ್ ಯು.ಕೆ. ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ನಿವೃತ್ತ ಶಿಕ್ಷಕಿ ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಶ್ರೀಮತಿ ಶಾರದಾ ಹಾಗೂ ಅವರ ಪತಿ ಬಾಲಚಂದ್ರ ಪೇರಾಲು ದಂಪತಿಯನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶುಪಾಲ ಕೆ.ಆರ್. ಗಂಗಾಧರ ಅವರು ಸನ್ಮಾನಿಸಿ, ಗೌರವಿಸಿದರು.

ಬೀಳ್ಕೊಡುಗೆ ಕಾರ್ಯಕ್ರಮದ ಬಳಿಕ ಸಮುದಾಯದತ್ತ ಶಾಲಾ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಬನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಸಿಬ್ಬಂದಿಗಳು, ಶಾಲಾ ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.