ತೊಡಿಕಾನ ದೇವಳದ ನಾಗ ಮತ್ತು ರಕ್ತೇಶ್ವರಿ ಕಟ್ಟೆಯಲ್ಲಿ ಪುನರ್ ಪ್ರತಿಷ್ಠಾ ಕಾರ್ಯಕ್ರಮ

0

ಎ.13ರಿಂದ ಕಾಲಾವಧಿ ಜಾತ್ರೋತ್ಸವ ಪ್ರಾರಂಭ

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದ ನಾಗ ಮತ್ತು ರಕ್ತೇಶ್ವರಿ ಕಟ್ಟೆಯಲ್ಲಿ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಎ.8 ಮತ್ತು 9ರಂದು ನಡೆಯಿತು.

ಎ.8ರಂದು ಸಾಯಂಕಾಲ ಸ್ಥಳಶುದ್ಧಿ, ಪುಣ್ಯಾಹ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತಹೋಮ, ವಾಸ್ತುಬಲಿ ಜರುಗಿತು.

ಎ.9ರಂದು ಬೆಳಿಗ್ಗೆ ಗಣಪತಿ ಹೋಮ, ಕಲಶಪೂಜೆ, ಪ್ರತಿಷ್ಠಾ ಕಾರ್ಯಕ್ರಮ, ಕಲಶಾಭಿಷೇಕ, ತಂಬಿಲ, ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.
ಎ.13ರಿಂದ ದೇಗುಲದಲ್ಲಿ ಕಾಲಾವಧಿ ಜಾತ್ರೋತ್ಸವವು ಪ್ರಾರಂಭಗೊಳ್ಳಲಿದೆ.