ಸುಳ್ಯ: ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಪ್ರಸಾದ್ ಸಿ ಕೆ ರವರಿಗೆ ಬೀಳ್ಕೊಡುಗೆ

0

ಎಸ್ ಸಿ ಡಿ ಸಿ ಸಿ ಬ್ಯಾಂಕ್ ನಿರ್ದೇಶಕರ ಎಸ್ ಎನ್ ಮನ್ಮಥರಿಗೆ ಅಭಿನಂದನಾ ಕಾರ್ಯಕ್ರಮ

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸ್ವಯಂ ನಿವೃತ್ತಿಗೊಂಡ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ ಕೆ ಅವರಿಗೆ ಬಿಳ್ಕೊಡುಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ನೂತನ ನಿರ್ದೇಶಕರಾಗಿ ಆಯ್ಕೆಗೊಂಡ ಎಸ್ ಎನ್ ಮನ್ಮಥರಿಗೆ ಅಭಿನಂದನಾ ಸಮಾರಂಭವು ಸುಳ್ಯ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಏ 10 ರಂದು ಸುಳ್ಯದಲ್ಲಿ ಜರುಗಿತು.

ಸುಳ್ಯ ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಅಧ್ಯಕ್ಷತೆ ವಹಿಸಿ, ಸನ್ಮಾನಿಸಿ, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರ ಬ್ಯಾಂಕ್ ನ ವ್ಯವಸ್ಥಾಪಕ ಪೂವಪ್ಪ ಗೌಡ, ಉಪ ವ್ಯವಸ್ಥಾಪಕ ಹುಕ್ರಪ್ಪ,ವಲಯ ಮೇಲ್ವಿಚಾರಕರು ಹಾಗೂ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್ ಎನ್ ಮನ್ಮಥರಿಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸುಳ್ಯ ಶಾಖೆ ವತಿಯಿಂದ ಮತ್ತು ವಲಯ ಮೇಲ್ವಿಚಾರಕರ ವತಿಯಿಂದ ಪ್ರತ್ಯೇಕ ಸನ್ಮಾನ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಸುದರ್ಶನ ಸ್ವಾಗತಿಸಿದರು. ಕಾರ್ಯನಿರ್ವಹಣಾಧಿಕಾರಿ ಪುರುಷೋತ್ತಮ ಶೆಟ್ಟಿ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಾಧಿಕಾರಿ ವಾಸುದೇವ ನಾಯಕ್ ವಂದಿಸಿದರು.