ಅಜ್ಜಾವರ ಗ್ರಾಮ ಕಾಂಗ್ರೆಸ್ ಸಭೆ

0

ಲೋಕಸಭಾ ಚುನಾವಣೆ ಅಜ್ಜಾವರ ಉಸ್ತುವಾರಿಯಾಗಿ ಪ್ರಸಾದ್ ರೈ ಮೇನಾಲ ಆಯ್ಕೆ

ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಅಜ್ಜಾವರ ಗ್ರಾಮ ಕಾಂಗ್ರೆಸ್ ಚುನಾವಣಾ ಪೂರ್ವತಯಾರಿ ಸಭೆ ಚುನಾವಣ ಪ್ರಚಾರ ಕಛೇರಿ ಸುಳ್ಯದಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಗ್ಯಾರೆಂಟಿ ಅನುಷ್ಟಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಭರತ್ ಮುಂಡೋಡಿ ಮಾತನಾಡಿ ಲೋಕಸಭಾ ಚುನಾವಣೆ ತಯಾರಿ ಕುರಿತು ಮಾತನಾಡಿದರು.

ಸಭೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಪಿ.ಸಿ ಜಯರಾಂ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ . ಎಂ. ಶಾಹಿದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ನಂದರಾಜ್ ಸಂಕೇಶ್, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಜಿಲ್ಲಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಗಳಾದ ಜಯಪ್ರಕಾಶ್ ರೈ, ಸುಳ್ಯ ಬ್ಲಾಕ್ ಪ್ರದಾನ ಕಾರ್ಯದರ್ಶಿಗಳಾದ ಪಿ. ಎಸ್ ಗಂಗಾಧರ್, ಸುಳ್ಯ ತಾಲೂಕಿನ ಗ್ಯಾರೆಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರು ಹಾಗೂ ಸುಳ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಾಹುಲ್ ಹಮೀದ್ ಕುತ್ತಮೊಟ್ಟೆ, ಜಿಲ್ಲಾ ಅಜ್ಜಾವರ ಗ್ರಾಮ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಾಹುಲ್ ಅಡ್ಪoಗಾಯ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾದ ಲೀಲಾಮನ್ಮೋಹನ್ ಗ್ಯಾರೆಂಟಿ ಸಮಿತಿ ಸದಸ್ಯರಾದ ರಂಜಿತ್ ರೈ, ಪ್ರಮುಖರಾದ ಅಜ್ಜಾವರ ಗ್ರಾಮ ಚುನಾವಣೆ ಉಸ್ತುವಾರಿ ಅದ ಪ್ರಸಾದ್ ರೈ ಮೇನಲ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಹಸೈನಾರ್ ಹಾಜಿ ಗೊರಡ್ಕ, ಪಂಚಾಯತ್ ಉಪಾಧ್ಯಕ್ಷರಾದ ಜಯರಾಮ್, ಪಂಚಾಯತ್ ಸದಸ್ಯರಾದ , ಅಬ್ದುಲ್ಲಾ, ಶ್ವೇತ ಕುಮಾರಿ, ಗೀತಾ, ದೇವಾಕಿ, ರಾಘವ, ಹಾಗೂ ಮೋಹನ್ ಕುಮಾರ್, ಸುಬ್ರಮಣ್ಯ, ರವೀಶ, ಅಬ್ದುಲ್ಲ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ನಾಯಕರು ಮತ್ತು ಸ್ಥಳೀಯ ಗ್ರಾಮ ಕಾಂಗ್ರೆಸ್ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಅಜ್ಜಾವರ ಗ್ರಾಮ ಕಾಂಗ್ರೆಸ್ ಗೆ ಲೋಕಸಭಾ ಚುನಾವಣಾ ಉಸ್ತುವಾರಿ ಯಾಗಿ ಪ್ರಸಾದ್ ರೈ ಮೇನಾಲರನ್ನು ನೇಮಕ ಮಾಡಲಾಯಿತು.