ಅಡ್ಕಾರು ಮಾವಿನಕಟ್ಟೆ ಬಳಿ ಬೈಕ್ ಸ್ಕಿಡ್, ಯುವಕನಿಗೆ ಗಾಯ

0

ಬೈಕ್ ಸ್ಕಿಡ್ ಆಗಿ ಬಿದ್ದು ಯುವಕ ಗಾಯಗೊಂಡ ಘಟನೆ ಜಾಲ್ಸೂರು ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಮೇ.11ರಂದು ಸಂಭವಿಸಿದೆ.
ಕನಕ ಮಜಲಿನ ಸತೀಶ್ ನೆಡಿಲು ಎಂಬವರು ಸುಳ್ಯದಿಂದ ಕನಕ ಮಜಲುಗೆ ತಮ್ಮ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮಾವಿನಕಟ್ಟೆ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ತಲೆ ಮತ್ತು ಕೈಕಾಲುಗಳಿಗೆ ಗಾಯಗೊಂಡಿದ್ದು ಸ್ಥಳೀಯರು ಸೇರಿ ಅವರನ್ನು ಆಂಬುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.