ಅಡ್ಕಾರು ಮಾವಿನಕಟ್ಟೆ ಬಳಿ ಬೈಕ್ ಸ್ಕಿಡ್ ಯುವಕನಿಗೆ ಗಂಭೀರ ಗಾಯ

0

ಮಂಗಳೂರಿನ ಆಸ್ಪತ್ರೆಗೆ ರವಾನೆ

ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಕನಕಮಜಲಿನ ನೆಡಿಲು ಸತೀಶ್ ಅವರು ಬೈಕ್ ಸ್ಕಿಡ್ ಆಗಿ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ಸೇರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದು, ಇದೀಗ ಸತೀಶ್ ಅವರ ತಲೆಗೆ ಗಂಭೀರವಾಗಿ ಗಾಯಗೊಂಡಿರುವುದರಿಂದ ಅವರನ್ನು ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.