ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವತಿಯಿಂದ ದಿ. ಉಪೇಂದ್ರ ಸುಬ್ರಾಯ ಕಾಮತ್ ಅವರಿಗೆ ಶ್ರದ್ಧಾಂಜಲಿ ಸಭೆ -ನುಡಿನಮನ ಸಲ್ಲಿಕೆ

0

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವತಿಯಿಂದ ವಿನೋಬನಗರದ ಶ್ರೀ ಅನಂತ ಸುಬ್ರಾಯ ಕಾಮತ್ & ಸನ್ಸ್ ಗೇರುಬೀಜ ಕಾರ್ಖಾನೆಯ ಸ್ಥಾಪಕರಾದ ದಿ. ಕೆ. ಉಪೇಂದ್ರ ಸುಬ್ರಾಯ ಕಾಮತ್ ಅವರಿಗೆ ಶ್ರದ್ಧಾಂಜಲಿ ಸಭೆ ಹಾಗೂ ನುಡಿನಮನ ಸಲ್ಲಿಕೆ ಕಾರ್ಯಕ್ರಮವು ಮೇ.12ರಂದು ಸಂಜೆ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ನಡೆಯಿತು.

ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ರಜತ್ ಅಡ್ಕಾರು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿವೇಕಾನಂದ ವಿದ್ಯಾಸಂಸ್ಥೆಯ ಸಹಶಿಕ್ಷಕ ಶಶಿಧರ ಮಹಾಬಲಡ್ಕ ಅವರು ಆಶಯಗೀತೆ ಹಾಡಿದರು.

ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಶರತ್ ಅಡ್ಕಾರು, ರವಿಶಂಕರ್ ಭಟ್ ಬೈತಡ್ಕ, ಕುಮಾರ ಭಟ್ ಅಡ್ಕಾರು, ಸುಬ್ರಹ್ಮಣ್ಯ ಪ್ರಸಾದ್ ಅಡ್ಕಾರು, ಗೋಪಾಲ ಅಡ್ಕಾರುಪದವು, ಕೆ.ಎಫ್.ಡಿ.ಸಿ. ನಿವೃತ್ತರಾದ ರಂಗನಾಥ್ ಅವರು ದಿ. ಕೆ. ಉಪೇಂದ್ರ ಸುಬ್ರಾಯ ಕಾಮತ್ ಅವರು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿ, ನುಡಿನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು, ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.