ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟಿಗೆ ಶಿವಪ್ರಕಾಶ್ ಕಡಪಳ ಸಹಾಯಧನ

0

ಸುಬ್ರಹ್ಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟಿಗೆ ಸಮಾಜದ ಅಭಿವೃದ್ಧಿ ಕಾರ್ಯಗಳಿಗಾಗಿ ಹಾಗೂ ದೀನದಲಿತರ ಶ್ರೇಯೋ ಅಭಿವೃದ್ಧಿ ಗಾಗಿ ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿಯ ಪೂರ್ವ ಅಧ್ಯಕ್ಷ ಶಿವಪ್ರಕಾಶ್ ಕಡಪಳ ಅಡ್ಡನಪಾರೆ ಅವರು ಸಹಾಯಧನವನ್ನು ನೀಡಿದರು.

ಈ ಸಂದರ್ಭದಲ್ಲಿ ಅವರನ್ನು ಗೌರವಿಸಲಾಯಿತು. ರವಿ ಕಕ್ಕೆಪದಾವು ಸಮಾಜ ಸೇವಾ ಟ್ರಸ್ಟಿನ ಸಂಸ್ಥಾಪಕರಾದ ಡಾlರವಿ ಕಕ್ಕೆಪದವು ಅವರು ಶಾಲು ಹೊಂದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ನ ಅಧ್ಯಕ್ಷ ವಿಶ್ವನಾಥ ನಡುತೋಟ, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕರಾದ ದಿನೇಶ್ ಹಾಲೆ ಮಜಲು, ವಿಜೇಶ್ ಹಿರಿಯಡ್ಕ, ಹಾಗೂ ಸತೀಶ್ ಮೂಕಮಲೆ ಉಪಸ್ಥಿತರಿದ್ದರು.