ಜಯನಗರ: ಹಲವಾರು ವರ್ಷಗಳ ಸಮಸ್ಯೆಗೆ ಕೊನೆಗೂ ಸಿಕ್ಕಿದ ಪರಿಹಾರ

0

ಹೊಸಗದ್ದೆ ಸಮೀಪ ಹೊಂಡ ಗುಂಡಿಗಳಿಂದ ತುಂಬಿದ ರಸ್ತೆಗೆ ಕಾಂಕ್ರೀಟೀಕರಣ ಆರಂಭ

ಹಳೆಗೇಟಿನಿಂದ ಜಯನಗರ ಸಂಪರ್ಕಿಸುವ ರಸ್ತೆಯ ಮಧ್ಯಭಾಗವಾದ ಹೊಸಗದ್ದೆ ಸಮೀಪ ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿ ಮಳೆಗಾಲದಲ್ಲಿ ವಾಹನ ಸವಾರರು ಸಂಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಸ್ಥಳೀಯ ನಿವಾಸಿಗಳು, ವಿವಿಧ ಸಂಘ ಸಂಸ್ಥೆಗಳು ಹಲವಾರು ಭಾರಿ ಶ್ರಮದಾನ ಮಾಡುವ ಮೂಲಕ ಈ ಹೊಂಡಗಳನ್ನು ಮುಚ್ಚುವ ಕಾರ್ಯ ಮಾಡುತ್ತಿದ್ದರು. ಆದರೆ ಕೆಲವು ದಿನಗಳ ಬಳಿಕ ಅದೇ ಪರಿಸ್ಥಿತಿ ನಿರ್ಮಾಣವಾಗಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿತ್ತು.

ಈ ಸಮಸ್ಯೆಯ ಬಗ್ಗೆ ಸುದ್ದಿ ಪತ್ರಿಕೆಯಲ್ಲಿ ಹಲವು ಭಾರಿ ವರದಿಗಳನ್ನು ಬಿತ್ತರಿಸಿ ಸಂಬಂಧಪಟ್ಟವರ ಗಮನಕ್ಕೆ ನೀಡಲಾಗಿತ್ತು.
ಇದೀಗ ನಗರ ಪಂಚಾಯತಿ ವತಿಯಿಂದ ಈ ಭಾಗದಲ್ಲಿ ಕಾಂಕ್ರೀಟೀಕರಣಕ್ಕೆ ಕಾಮಗಾರಿ ಆರಂಭಗೊಂಡಿದ್ದು ಸುಮಾರು 27 ಮೀಟರ್ ಗಳ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ.


ಇದರಿಂದಾಗಿ ಹಲವಾರು ವರ್ಷಗಳಿಂದ ಇದ್ದ ಸಮಸ್ಯೆಗೆ ಮುಕ್ತಿ ಲಭಿಸಿದಂತಾಗುತ್ತದೆ.