ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಸುಳ್ಯ ಕಛೇರಿಯಲ್ಲಿ ಪ್ರವಾಹ ರಕ್ಷಣಾ ತಂಡದ ಪೂರ್ವಸಿದ್ಧತೆ

0

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುಳ್ಯ ಕಛೇರಿಯಲ್ಲಿ ಮೇ. ೧೯ ರಂದು ಪ್ರವಾಹ ರಕ್ಷಣಾ ತಂಡಗಳ ಪೂರ್ವಸಿದ್ಧತೆ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಪ್ರವಾಹ ರಕ್ಷಣಾ ತಂಡದ ಸಾಮಾಗ್ರಿಗಳಾದ ಆಸ್ಕಾ ಲೈಟ್, ಲೈಫ್ ಜಾಕೆಟ್, ಲೈಫ್ ಬಾಯ್ ಮತ್ತು ಹಗ್ಗಗಳನ್ನು ಸರಿಯಾಗಿದೆಯೇ ಎಂದು ಪರೀಕ್ಷಿಸಿ ಪ್ರವಾಹ ರಕ್ಷಣಾ ತಂಡವನ್ನು ಸಿದ್ಧ ಪಡಿಸಿ, ಪ್ರವಾಹ ರಕ್ಷಣಾ ತಂಡದ ಸದಸ್ಯರುಗಳಿಗೆ ಪ್ರವಾಹ ರಕ್ಷಣೆಯನ್ನು ಯಾವ ರೀತಿಯಾಗಿ ಮಾಡುವುದು ಎಂದು ಮಾರ್ಗಸೂಚನೆ ನೀಡಿದರು. ಜಿಲ್ಲಾ ಕಛೇರಿಯಿಂದ ತುರ್ತುಕರೆ ಬಂದಾಗ ತಯಾರಾಗಿರುವಂತೆ ರಕ್ಷಣಾ ತಂಡದ ಸದಸ್ಯರುಗಳಿಗೆ ಸೂಚನೆ ನೀಡಿದರು.


ಕೇಂದ್ರ ಕಛೇರಿಯಿಂದ ನೀಡಲಾದ ಪ್ರವಾಹ ರಕ್ಷಣಾ ಸಾಮಾಗ್ರಿಗಳನ್ನು ಸುಳ್ಯ ಘಟಕದ ಪ್ರಭಾರ ಘಟಕಾಧಿಕಾರಿ ಸೋಮನಾಥರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗೃಹರಕ್ಷಕರಾದ ಗಿರಿಧರ್,ರಜಾಕ್ ಮುಂತಾದವರು ಉಪಸ್ಥಿತರಿದ್ದರು.