ಎಡಮಂಗಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ

0

ಎಡಮಂಗಲ ಗ್ರಾಮದ ಪುಚ್ಚಾಜೆ ದಿ.ಪುಟ್ಟಣ್ಣ ಗೌಡರವರ ಪುತ್ರ ಪ್ರಸನ್ನ ಕುಮಾರ್ ಮೇ 20 ರಂದು ಬೆಂಗಳೂರಿನಲ್ಲಿ ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ಬೆಂಗಳೂರಿನ ಮಾರತಹಳ್ಳಿಯ ಸಂಸ್ಥೆಯೊಂದರಲ್ಲಿ ಎ.ಸಿ ಟೆಕ್ನೀಷಿಯನ್ ಆಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಸೋಮವಾರ ಬೆಳಿಗ್ಗೆ ಸಂಸ್ಥೆಯ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅವರಿಗೆ 26 ವರ್ಷ ವಯಸ್ಸಾಗಿತ್ತು. ಮೃತರು ತಾಯಿ ಗಂಗಮ್ಮ, ಸಹೋದರರಾದ ದೀಕ್ಷಿತ್, ಸನತ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.