ವಿಧಾನ ಪರಿಷತ್ ಚುನಾವಣೆ : ಐವರ್ನಾಡು ಸಹಕಾರಿ ಸಂಘದಲ್ಲಿ ಎನ್.ಡಿ.ಎ ಅಭ್ಯರ್ಥಿಗಳ ಪರ ಮತ ಯಾಚನೆ

0

ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಚುನಾವಣೆ ಜೂ.03 ರಂದು ನಡೆಯಲಿದ್ದು ಮೇ.28 ರಂದು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಅಭ್ಯರ್ಥಿಗಳಾದ ಧನಂಜಯ ಸರ್ಜಿ ,ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇ ಗೌಡರ ಪರ ಮತ ಯಾಚನೆ ಮಾಡಲಾಯಿತು.

ಸಂಘದ ಸಿಇಒ ದೀಕ್ಷಿತ್ ಮತ್ತು ಸಿಬ್ಬಂದಿ ವರ್ಗದವರಿಗೆ ಶಾಸಕಿ ಭಾಗೀರಥಿ ಮುರುಳ್ಯರವರು ಮನವಿಯನ್ನು ನೀಡಿ ಮತ ಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ, ಎ.ಪಿ.ಎಂ‌.ಸಿ ಮಾಜಿ ಉಪಾಧ್ಯಕ್ಷ ಸಂತೋಷ್ ಜಾಕೆ, ಜಿಲ್ಲಾ ಸಾಮಾಜಿಕ ಜಾಲತಾಣ ಸಮಿತಿ ಸದಸ್ಯ ಪ್ರಸಾದ್ ಕಾಟೂರು, ರವಿನಾಥ ಎಂ.ಎಸ್, ಸತ್ಯನಾರಾಯಣ ಅಚ್ರಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.