ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಣ್ಣಿಗೆ ಚಿಕಿತ್ಸೆಗೆ ಚೆಕ್ ಹಸ್ತಾಂತರ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಬೆಳ್ಳಾರೆ ವಲಯದ ಐವರ್ನಾಡು ಒಕ್ಕೂಟದ ಜ್ಞಾನಶ್ರೀ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ಭವಾನಿ ರವರಿಗೆ ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ಮಂಜುರಾಗಿದ್ದು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಶ್ರೀಮತಿ ವೇದ ಎಚ್ ಶೆಟ್ಟಿ ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಕುಮಾರ್, ಉಪಾಧ್ಯಕ್ಷರಾದ ಶ್ರೀಮತಿ ರೋಹಿತಾಕ್ಷಿ, ಕೃಷಿ ಮೇಲ್ವಿಚಾರಕರಾದ ರಮೇಶ್, ಸೇವಾ ಪ್ರತಿನಿಧಿಯಾದ ಶ್ರೀಮತಿ ವನಿತಾ ,ನಗದು ಸಹಾಯಕರಾದ ಸದಾನಂದ ಹಾಗೂ ಸದಸ್ಯರು ಉಪಸ್ಥಿತರಿದ್ದರು.