ನಾಳೆ ಕೊಲ್ಲಮೊಗ್ರ ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತ ಸಂಭ್ರಮ ಕಾರ್ಯಕ್ರಮ

0

ವಿಧಾನಸಭಾ ಸಭಾಪತಿ ಯು.ಟಿ ಖಾದರ್, ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಭಾಗಿ

ಕೊಲ್ಲಮೊಗ್ರ ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಯಶಸ್ವಿ ೧೦೦ ವರ್ಷಗಳನ್ನು ಪೂರೈಸಿದ್ದು, ಇದರ ಸವಿ ನೆನಪಿಗಾಗಿ ಶತ ಸಂಭ್ರಮ ಕಾರ್ಯಕ್ರಮ ಮೇ.೩೧ರಂದು ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಲಿದೆ.

ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಸಹಕಾರ ಧ್ವಜಾ ರೋಹಣವನ್ನು ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ನೆರವೇರಿಸಲಿದ್ದಾರೆ. ಶತಮಾನೋತ್ಸವ ನಾಮಫಲಕ ಅನಾವರಣ ಮತ್ತು ನೂತನ ಪೆಟ್ರೋಲ್ ಪಂಪು ಕಟ್ಟಡ ಶಿಲಾನ್ಯಾಸವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ಮಾಡಲಿದ್ದಾರೆ. ಮೆರವಣಿಗೆಯನ್ನು ಮಂಗಳೂರು ಕೆ.ಎಂ.ಎಫ್. ಅಧ್ಯಕ್ಷರಾದ ಸುಚರಿತ ಶೆಟ್ಟಿ ಉದ್ಘಾಟಿಸಲಿದ್ದಾರೆ.


ಬಳಿಕ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ ನೆರವೇರಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಲ|ರಾಮಚಂದ್ರ ಪಳಂಗಾಯ ವಹಿಸಲಿದ್ದಾರೆ. ಶತ ಸಂಭ್ರಮ ಸ್ಮರಣ ಸಂಚಿಕೆ ಬಿಡುಗಡೆಯನ್ನು ಸುಳ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ ರವರು ನೆರವೇ ರಿಸಲಿದ್ದಾರೆ.


ಸ್ಥಳ ದಾನಿಗಳಿಗೆ ಸನ್ಮಾನವನ್ನು ಮಂಗಳೂರು ಸಹಕಾರ ಸಂಘಗಳ ಉಪ ನಿಬಂಧಕರಾದ ಹೆಚ್. ಎನ್. ರಮೇಶ್ ರವರು ಮಾಡಲಿದ್ದಾರೆ. ಸಂಘದ ಪೂರ್ವದ ಪೂರ್ವ ಧ್ಯಕ್ಷರುಗಳಿಗೆ ಸನ್ಮಾನವನ್ನು ದ.ಕ ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕ್, ಮಂಗಳೂರು ಇದರ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ರವರು ನೆರವೇರಿಸಲಿದ್ದಾರೆ. ವಿಶ್ರಾಂತ ಮುಖ್ಯ ನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸನ್ಮಾನವನ್ನು ಪುತ್ತೂರು ವಿಭಾಗ ಸಹಕಾರ ಸಂಘದ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್ ಅವರು ನೆರವೇರಿಸರಿದ್ದಾರೆ. ಸಂಘದ ಶತಮಾನೋತ್ಸವ ಕಾರ್ಯಕ್ರಮ ಪ್ರಯುಕ್ತ ನಡೆದ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಣೆಯನ್ನು ದ.ಕ. ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕ್ ನ ನಿರ್ದೇಶಕರಾದ ಎಸ್. ಎನ್ ಮನ್ಮಥ ರವರು ನೀಡಲಿದ್ದಾರೆ. ಮರಣ ಸಾಂತ್ವನ ನಿಧಿ
ಲೋಕಾರ್ಪಣೆಯನ್ನು ಪುತ್ತೂರು ಎಸ್.ಆರ್.ಕೆ ಲ್ಯಾಡರ್ಸ್ ಇದರ ಮಾಲಕರದ ಕೇಶವ ಅಮೈ ರವರು ನೆರವೇರಿಸಲಿದ್ದಾರೆ. ಸಾಧಕರಿಗೆ ಸನ್ಮಾನ ಮತ್ತು ಗೌರವ ಉಪಸ್ಥಿತರಾಗಿ ಹರಿಹರ ಪಲ್ಲ ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯಕುಮಾರ್ ಅಂಙಣ,ಕೊಲ್ಲಮೊಗ್ರ ಗ್ರಾ.ಪಂ.ಅಧ್ಯಕ್ಷೆ ಜಯಶ್ರೀ ಚಾಂತಾಳ, ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು,ಸ್ಮರಣ ಸಂಚಿಕೆ ಸಂಪಾದಕ ಪ್ರಭಾಕರ ಕಿರಿಭಾಗ, ಉಪಸಂಪಾದಕ ಶ್ರೀಧರ ಭಾಗವತ್, ಸಂಘದ ಅಧ್ಯಕ್ಷರಾದ ಹರ್ಷಕುಮಾರ್ ದೇವಜನ, , ಉಪಾಧ್ಯಕ್ಷರಾದ ಶೇಖರ್ ಅಂಬೆಕಲ್ಲು, ನಿರ್ದೇಶಕರು ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ.