ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಡಾ.ನಿಂಗಯ್ಯರು ಸೇವಾ ನಿವೃತ್ತಿ

0

ಸಂಘ ಸಂಸ್ಥೆಗಳಿದ ಗೌರವಾರ್ಪಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರು ಮೇ.31 ರಂದು ನಿವೃತ್ತಿ ಹೊಂದಲಿದ್ದು ಈ ಹಿನ್ನೆಲೆಯಲ್ಲಿ ಸಂಘ ಸಂಸ್ಥೆಗಳ ವತಿಯಿಂದ ಮೇ.30 ರಂದು ಗೌರವಿಸಲಾಯಿತು.

ಗೌರವಾರ್ಪಣೆ ಕಾರ್ಯಕ್ರಮ ಮತ್ತು ಸಾರ್ವಜನಿಕ ಸನ್ಮಾನ ಸುಬ್ರಹ್ಮಣ್ಯದ ವಲ್ಲೀಶ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅನೇಕ ಸಂಘ ಸಂಸ್ಥೆಗಳು, ಸಾರ್ವಜನಿಕ ವಲಯದ ಸನ್ಮಾನಿಸಿ ಶುಭ ಹಾರಿಸಲಾಯಿತು.


ಡಾ.ನಿಂಗಯ್ಯ ಅವರ ಪತ್ನಿ ನಾಗರತ್ನ,ಅವರ ಪುತ್ತಿಯರಾದ ನವ್ಯಶ್ರೀ, ನಿಧಿಶ್ರೀ, ಶ್ರೀ ದೇವಳದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್, ಕೆ.ಎಸ್.ಎಸ್ ಕಾಲೇಜಿನ ಪ್ರಾಂಶುಪಾಲ ಡಾ.ದಿನೇಶ್ ಪಿ.ಟಿ., ಎಸ್.ಎಸ್.ಪಿ.ಯು ಕಾಲೇಜಿನ ಪ್ರಾಚಾರ್ಯ ಸೋಮಶೇಖರ್ ನಾಯಕ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಯಶವಂತ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಅತಿಥಿಗಳಾಗಿ ಭಾಗವಹಿಸಿದ ಮಾಜಿ ಸಚಿವ ಎಸ್.ಅಂಗಾರ ಮಾತನಾಡಿ,
ಶಾಸಕಿ ಭಾಗೀರಥಿ ಮುರುಳ್ಯ , ಕುಕ್ಕೆ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಶುಭಹಾರೈಸಿದರು.
ಮಾಜಿ ಸದಸ್ಯ ಕೃಷ್ಣಮೂರ್ತಿ ಭಟ್, ಮಾಜಿ ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಮಾಜಮಾಸ್ಟರ್ ಪ್ಲಾನ್ ಸಮಿತಿ ಮಾಜಿ ಸದಸ್ಯ ಶಿವರಾಮ ರೈ ಮೊದಲಾದವರು ಶುಭ ಹಾರೈಸಿದರು. ಪ್ರಾಚಾರ್ಯ ಸೋಮಶೇಖರ ನಾಯಕ್ ಅಭಿನಂದನಾ ಭಾಷಣ ಮಾಡಿದರು. ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು. ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ವಂದಿಸಿದರು.

ಹುಟ್ಟೂರಿನಿಂದ ಬೃಹತ್ ಹಾರ:
ಸನ್ಮಾನ ಸಮಾರಂಭಕ್ಕೆ ಅವರ ಹುಟ್ಟೂರಿನಿಂದ ನೂರಾರು ಅಭಿಮಾನಿಗಳು ಆಗಮಿಸಿದ್ದರು. ಅಲ್ಲದೆ ಬೃಹತ್ ಹಾರ ಹಾಕಿ ಡಾ.ನಿಂಗಯ್ಯ ಅವರನ್ನು ಸನ್ಮಾನಿಸಿ ಸಂತಸಪಟ್ಟರು.ಪ್ರೆಸ್ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆಶ್ರೀ ಅಟೋ ಚಾಲಕ ಮಾಲಕರ ಸಂಘ, ಲೋಕೋಪಯೋಗಿ ಇಲಾಖೆ, ವಿವಿಧ ಬ್ಯಾಂಕುಗಳು, ಸಹಕಾರಿ ಸಂಘಗಳು, ಡಾ.ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್, ಕುಕ್ಕೆ ದೇವಳದ ನೌಕರರ ವೃಂದ ಸೇರಿದಂತೆ ಸಂಘ ಸಂಸ್ಥೆಗಳು, ನೂರಾರು ಅಭಿಮಾನಿಗಳು ಡಾ.ನಿಂಗಯ್ಯ ಅವರನ್ನು ಸನ್ಮಾನಿಸಿದರು.