ಕೊಲ್ಲಮೊಗ್ರ ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತ ಸಂಭ್ರಮ ಕಾರ್ಯಕ್ರಮ

0

ಕೊಲ್ಲಮೊಗ್ರ ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತ ಸಂಭ್ರಮ ಕಾರ್ಯಕ್ರಮದ ಸಭಾ ಕಾರ್ಯಕ್ರಮಕ್ಕೆ ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ ನೀಡಿದ್ದಾರೆ.

ದ.ಕ. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರುಗಳಾದ ಶಶಿಕುಮಾರ್ ಬಾಲ್ಯೋಟ್ಟು, ಎಸ್.ಎನ್. ಮನ್ಮಥ, ಕೆ.ಎಂ.ಎಫ್. ಅಧ್ಯಕ್ಷರಾದ ಸುಚರಿತ ಶೆಟ್ಟಿ ಪುತ್ತೂರು ಎಸ್.ಆರ್.ಕೆ ಲ್ಯಾಡರ್ಸ್ ಇದರ ಮಾಲಕರಾದ ಕೇಶವ ಅಮೈ ಉಪಸ್ಥಿತರಿದ್ದಾರೆ.

ಸಭಾಧ್ಯಕ್ಷತೆಯನ್ನು ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಲ|ರಾಮಚಂದ್ರ ಪಳಂಗಾಯ ವಹಿಸಿದ್ದಾರೆ.

ಗೌರವ ಉಪಸ್ಥಿತರಾಗಿ ಹರಿಹರ ಪಲ್ಲ ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯಕುಮಾರ್ ಅಂಙಣ, ಕೊಲ್ಲಮೊಗ್ರ ಗ್ರಾ.ಪಂ.ಅಧ್ಯಕ್ಷೆ ಜಯಶ್ರೀ ಚಾಂತಾಳ, ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು, ಸ್ಮರಣ ಸಂಚಿಕೆ ಸಂಪಾದಕ ಪ್ರಭಾಕರ ಕಿರಿಭಾಗ, ಉಪಸಂಪಾದಕ ಶ್ರೀಧರ ಭಾಗವತ್ ಭಾಗವಹಿಸಿದ್ದು, ಸಂಘದ ಅಧ್ಯಕ್ಷರಾದ ಹರ್ಷಕುಮಾರ್ ಡಿ.ಎಸ್, , ಉಪಾಧ್ಯಕ್ಷರಾದ ಶೇಖರ್ ಅಂಬೆಕಲ್ಲು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಮ ಮಣಿಯಾನ ಮನೆ, ನಿರ್ದೇಶಕರುಗಳಾದ ವಿನೂಪ್ ಮಲ್ಲಾರ, ಮಣಿಕಂಠ ಕೊಳಗೆ, ಗಿರೀಶ್ ಕಟ್ಟೆಮನೆ, ತಾರಾನಾಥ ಮುಂಡಾಜೆ, ಶ್ರೀಮತಿ ವಿಜಯ ಕೆ.ಜೆ, ವಿಜಯ ಕೆ.ಎಸ್, ರಾಜೇಶ್ ಪರಮಲೆ, ಸುರೇಶ್ ಕೆ, ಮೋನಪ್ಪ ಕೆ, ಬೊಳಿಯ ಬೆಂಡೋಡಿ, ವಲಯ ಮೇಲ್ವಿಚಾರಕ ಮನೋಜ್ ಕುಮಾರ್, ಶತಮಾನೊತ್ಸವ ಸಮಿತಿಯ ಉಪಾಧ್ಯಕ್ಷರುಗಳಾದ ಕಮಲಾಕ್ಷ ಮುಳ್ಳುಬಾಗಿಲು, ರಾಧಾಕೃಷ್ಣ ಬಿಲ್ಲಾರಮಜಲು, ಸಹ ಕಾರ್ಯದರ್ಶಿ ಶೇಷಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಅಧ್ಯಕ್ಷ ಹರ್ಷಕುಮಾರ್ ಡಿ.ಎಸ್. ಸ್ವಾಗತಿಸಿ ಪ್ರಸ್ತಾವನೆಗೈದರು. ವಿನ್ಯಾಸ್ ಹೊಸೊಳಿಕೆ, ನಿತ್ಯಾನಂದ ಭೀಮಗುಳಿ ಕಾರ್ಯಕ್ರಮ‌ ನಿರೂಪಿಸಿದರು.