ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಪ್ರಥಮ ದರ್ಜೆ ಗುಮಾಸ್ತರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

0

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಪ್ರಥಮ ದರ್ಜೆ ಗುಮಾಸ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಆಕಸ್ಮಿಕವಾಗಿ ನಿಧನರಾದ ಭಾಸ್ಕರ ಶೇಣಿಯವರಿಗೆ ಶ್ರದ್ಧಾಂಜಲಿ ಸಭೆ ಜೂ. 1ರಂದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಪ್ರಧಾನ ಕಚೇರಿ ಕೋಟೆಮುಂಡುಗಾರು ಇದರ ಸಭಾಂಗಣದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪುರವರ ಅಧ್ಯಕ್ಷತೆಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಸಂಘದ ಮಾಜಿ ಅಧ್ಯಕ್ಷ ವಾರಣಾಶಿ ಗೋಪಾಲಕೃಷ್ಣ, ಕಳಂಜ ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಬೇರಿಕೆ, ಕಳಂಜ ಯುವಕ ಮಂಡಲದ ಅಧ್ಯಕ್ಷ ಶಿವರಾಮ ಕಜೆಮೂಲೆ, ಕಳಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರುಕ್ಮಯ್ಯ ಗೌಡ ಕಳಂಜ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ದಿವಾಕರ ಕಾವಿನಮೂಲೆ, ಭಾಸ್ಕರ ಶೇಣಿಯವರ ಪತ್ನಿ ವಿಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾಧ್ಯಕ್ಷ ಕರುಣಾಕರ ಶೆಟ್ಟಿ ನಾಲ್ಗುತ್ತು ವಂದಿಸಿದರು.

ಸಿಬ್ಬಂದಿ ಕು. ಗೀತಾ ಎ. ಕಾರ್ಯಕ್ರಮ ನಿರೂಪಿಸಿದರು. ಸಭಿಕರ ಪರವಾಗಿ ಕೋಟೆಮುಂಡುಗಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿಯ ಅಧ್ಯಕ್ಷ ಮುಂಡುಗಾರು ಸುಬ್ರಹ್ಮಣ್ಯ, ಬಳಕೆದಾರರ ವೇದಿಕೆಯ ಅಧ್ಯಕ್ಷ ಈಶ್ವರ ವಾರಣಾಶಿ, ನಿವೃತ್ತ ಮುಖ್ಯ ಶಿಕ್ಷಕ ಮೇದಪ್ಪ ಗೌಡ ತಂಟೆಪ್ಪಾಡಿ, ಕಳಂಜ ಬಾಳಿಲ ಪ್ರಾ.ಕೃ.ಪ.ಸ‌.ಸಂಘದ ನಿರ್ದೇಶಕ ಬಿ. ಸುಭಾಶ್ಚಂದ್ರ ರೈ, ಭಾರತೀಯ ಜೀವವಿಮಾ ನಿಗಮದ ಚೀಫ್ ಅಡೈಸರ್ ಬಜನಿಗುತ್ತು ಪ್ರಭಾಕರ ಆಳ್ವ ನುಡಿನಮನ ಸಲ್ಲಿಸಿದರು. ಸಂಘದ ಕೋಟೆಮುಂಡುಗಾರು ಪ್ರಧಾನ ಕಚೇರಿ, ಬಾಳಿಲ ಮತ್ತು ಪಂಜಿಗಾರು ಶಾಖೆಯ ಸಿಬ್ಬಂದಿಗಳು, ಸಂಘದ ಸದಸ್ಯರು ‌ಮತ್ತು ಭಾಸ್ಕರ ಶೇಣಿಯವರ ಬಂಧುಗಳು, ಅಭಿಮಾನಿಗಳು ಸಭೆಯಲ್ಲಿ ಭಾಗವಹಿಸಿದ್ದರು.