ಕೆಎಸ್‌ಆರ್ಟಿಸಿ ಬಸ್ಸು ನಿಲ್ದಾಣದ ಬಳಿ ಮೃತಪಟ್ಟಿದ್ದ ಅಪರಿಚಿತ ವ್ಯಕ್ತಿಯ ಸಂಬಂಧಿಕರ ಪತ್ತೆ

0

ಸುಳ್ಯ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದ ಬಳಿ ಮೇ 3೦ ರಂದು ರಾತ್ರಿ ಮೃತಪಟ್ಟಿದ್ದ ಅಪರಿಚಿತ ವ್ಯಕ್ತಿಯ ಸಂಬಂಧಿಕರು ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಮೃತ ವ್ಯಕ್ತಿಯ ಹೆಸರು ರಾಜೇಂದ್ರ ಎಂದು ತಿಳಿದು ಬಂದಿದ್ದು ಮೂಲತಃ ತಮಿಳುನಾಡು ಮೂಲದ ಈ ವ್ಯಕ್ತಿ ಪಾಣತ್ತೂರು ಕರಿಕೆಯಲ್ಲಿ ವಾಸಿಸುತ್ತಿದ್ದರು. ಮೃತರ ಪತ್ನಿ ಹಾಗೂ ಓರ್ವ ಪುತ್ರನಿದ್ದು ಅವರು ಮೃತ ದೇಹವನ್ನು ಪಡೆಯಲು ಸುಳ್ಯಕ್ಕೆ ಬರುತ್ತಿದ್ದಾರೆಂದು ತಿಳಿದುಬಂದಿದೆ.