ಬೊಳುಬೈಲು : ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ, ಚಾಲಕ ಮತ್ತು ಪ್ರಯಾಣಿಕರು ಪಾರು

0

ಬೊಳುಬೈಲು ಸಮೀಪ ಮಾಣಿ ಮೈಸೂರು ಹೆದ್ದಾರಿಯಲ್ಲಿ ಕಾಸರಗೋಡಿನಿಂದ ಸುಳ್ಯದತ್ತ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಬಿದ್ದ ಘಟನೆ ಇದೀಗ ವರದಿಯಾಗಿದೆ.
ಕಾರಿನಲ್ಲಿ ಚಾಲಕ ಸೇರಿ ಮೂರು ಜನರಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯರು ಕಾರನ್ನು ಮೇಲಕ್ಕೆತ್ತಿ ಸಹಕರಿಸಿದ್ದಾರೆ.