ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕ್ಯಾಪ್ಟನ್ ಚೌಟ ಮುನ್ನಡೆ

0

ಮಂಗಳೂರು ಮತ ಎಣಿಕೆ ಕೇಂದ್ರದ ಬಳಿ ಸೇರಿರುವ ಬಿಜೆಪಿ ಕಾರ್ಯಕರ್ತರಿಂದ ಜೈಕಾರ

ದ.ಕ. ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ಸುರತ್ಕಲ್ ನ ಎನ್.ಐ.ಟಿ.ಕೆ. ಕೇಂದ್ರದಲ್ಲಿ ನಡೆಯುತ್ತಿದ್ದು, ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರು ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ಜೈಕಾರ ಹಾಕುತ್ತಿದ್ದಾರೆ.


ಇದೀಗ ಬಂದ ಮಾಹಿತಿ ಪ್ರಕಾರ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರು 28 ಸಾವಿರ ಮತಗಳ ಮುನ್ನಡೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.