ಆಲೆಟ್ಟಿ ಸದಾಶಿವ ದೇವಳಕ್ಕೆ ಭೇಟಿ ನೀಡಿದ ಶಾಸಕಿ ಕು. ಭಾಗೀರಥಿ ಮುರುಳ್ಯ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕ ಮಹೋತ್ಸವದಂದು ಸುಳ್ಯ. ವಿಧಾನ ಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ದೇವಸ್ಥಾನದ ಶಾಶ್ವತ ಚಪ್ಪರ ನಿರ್ಮಾಣದ ಕೆಲಸವು ತ್ವರಿತ
ಗತಿಯಲ್ಲಿ ನಡೆಯುತ್ತಿದ್ದು ಶಾಸಕರು ಆಗಮಿಸಿ ವೀಕ್ಷಿಸಿದರು.ಸಮಿತಿಯ ಸದಸ್ಯರ ಬೇಡಿಕೆಗೆ ಸ್ಪಂದಿಸಿದ ಶಾಸಕರು ಚಪ್ಪರ ನಿರ್ಮಿಸಲು ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ, ಶ್ರೀಪತಿ ಬೈಪಡಿತ್ತಾಯ, ಜೀ.ಸ.ಅಧ್ಯಕ್ಷ ಎನ್.ಎ.ರಾಮಚಂದ್ರ, ಸೇ.ಸ.ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು, ಆರ್ಥಿಕ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ,


ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ವೀಣಾವಸಂತ ಆಲೆಟ್ಟಿ, ಹರಿಪ್ರಸಾದ್ ಗಬ್ಬಲ್ಕಜೆ, ಅಚ್ಚುತ ಮಣಿಯಾಣಿ ಆಲೆಟ್ಟಿ, ರಾಮಚಂದ್ರ ಆಲೆಟ್ಟಿ, ಪುರುಷೋತ್ತಮ ದೋಣಿಮೂಲೆ, ವಸಂತ ನಡುಬೈಲು, ಶ್ರೀನಾಥ್ ಬಾಳಿಲ,ಅರುಣಾಚಲ ಭೂತಕಲ್ಲು, ಹರ್ಷಿತ್ ಬನ್ನಿಂತಾಯ ಮತ್ತಿತರರು ಉಪಸ್ಥಿತರಿದ್ದರು.