ಕಲ್ಲುಗುಂಡಿ ಬಿ.ಎಂ.ಎಸ್ ಆಟೋ ಚಾಲಕ ಸಂಘದ ವತಿಯಿಂದ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಕಾರ್ಯಕ್ರಮ

0

ಕಲ್ಲುಗುಂಡಿ B.M.S ಆಟೋಚಾಲಕ ಸಂಘ (ರಿ) ಘಟಕ ವತಿಯಿಂದ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಕಾರ್ಯಕ್ರಮ ಜೂನ್ 7 ರಂದು ಕಲ್ಲುಗುಂಡಿ ವಿಷ್ಣು ಮೂರ್ತಿ ಸಭಾಂಗಣದಲ್ಲಿ ನಡೆಯಿತು.

ಕಲ್ಲುಗುಂಡಿ ಘಟಕದ ವಾರ್ಷಿಕ ಮಹಾಸಭೆ ವರದಿಯನ್ನು ಕಲ್ಲುಗುಂಡಿ ಬಿ.ಎಂ.ಎಸ್ ಘಟಕದ ಅಧ್ಯಕ್ಷ ಕೇಶವ ಬಂಗ್ಲೆಗುಡ್ಡೆ ಅವರ ಉಪಸ್ಥಿತಿಯಲ್ಲಿ ಸಂಘದ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ರವಿಕುಮಾರ್ ನಿಡಿಂಜಿ ಅವರು ನೀಡಿದರು.ಸಂಘದ ವಾರ್ಷಿಕ ಲೆಕ್ಕಾಚಾರವನ್ನು ಖಜಾಂಜಿ ಕೃಷ್ಣಪ್ರಸಾದ್ ಕಾಪಿಲ ಅವರು ಮಂಡಿಸಿದರು.

ಬಳಿಕ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸುಳ್ಯ ತಾಲೂಕು ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ಮತ್ತು ಕಾರ್ಯದರ್ಶಿ ಚಂದ್ರಶೇಖರ ಮರ್ಕಂಜ ಅವರ ಉಪಸ್ಥಿತಿಯಲ್ಲಿ ನಡೆಯಿತು‌.ನೂತನ‌ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾಗಿ ವಸಂತ ಊರುಬೈಲು, ಅಧ್ಯಕ್ಷರಾಗಿಕೇಶವ ಬಂಗ್ಲೆಗುಡ್ಡೆ ,ಕಾರ್ಯದರ್ಶಿ ಪ್ರಮೋದ್ ಕೈಪಡ್ಕ ,ಖಜಾಂಜಿ ಕೃಷ್ಣಪ್ರಸಾದ್ ಕಾಪಿಲಅವರನ್ನು‌‌ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಬಳಿಕ 15 ವರ್ಷಗಳಿಂದ ಕಲ್ಲುಗುಂಡಿ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ವಸಂತ ಊರುಬೈಲು ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿ. ಎಂ.ಎಸ್ ಆಟೋ ಚಾಲಕ ಸಂಘದ ಸದಸ್ಯರು ಉಪಸ್ಥಿತರಿದ್ದರು