ಪಾಂಡಿಗದ್ದೆ ಶಾಲೆಯಲ್ಲಿ ಲೇಖನ ಪುಸ್ತಕಗಳ ವಿತರಣಾ ಕಾರ್ಯಕ್ರಮ

0

ಪಾಂಡಿಗದ್ದೆ ದ ಕ.ಜಿ.ಪಂ.ಕಿ ಪ್ರಾ ಶಾಲೆಯಲ್ಲಿ ಜೂ. 7 ರಂದು ಲೇಖನ ಪುಸ್ತಕಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಶಾಲೆಯ ಪೂರ್ವ ವಿದ್ಯಾರ್ಥಿ ಹಾಗೂ ದಾನಿಗಳಾಗಿರುವ ಜಯರಾಮ ಕಂಬಳ ಇವರು ಶಾಲೆ ಎಲ್ಲ ವಿದ್ಯಾರ್ಥಿಗಳಿಗೆ ಈ ಶೈಕ್ಷಣಿಕ ವರ್ಷಕ್ಕೆ ಅಗತ್ಯವಿರುವ ಪುಸ್ತಕಗಳನ್ನು ನೀಡಿದರು ಪುಸ್ತಕ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ವಾಚಣ್ಣ ಕೆರೆಮೂಲೆ ವಹಿಸಿದ್ದರು.

ಲೇಖನ ಪುಸ್ತಕಗಳ ದಾನಿಗಳಾದ ಜಯರಾಮ ಕಂಬಳ ಮಾತನಾಡುತ್ತಾ ನಮ್ಮ ಶಾಲೆಯಲ್ಲಿ ಉತ್ತಮ ಶಿಕ್ಷಕರಿದ್ದಾರೆ ಹಾಗೂ ಸಾಕಷ್ಟು ಸೌಲಭ್ಯಗಳಿವೆ. ದಾನಿಗಳ ಮೂಲಕವೂ ಹಲವಾರು ಸೌಲಭ್ಯಗಳು ಹರಿದು ಬರುತ್ತಿವೆ. ವಿದ್ಯಾರ್ಥಿಗಳು ಇವೆಲ್ಲವನ್ನು ಸದುಪಯೋಗಪಡಿಸಬೇಕೆಂದು ಹೇಳಿ ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮಣ ಗೌಡ ಬೊಳ್ಳಾಜೆ ಹಾಗೂ ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಉಷಾ ಕಂಬಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಿದ್ಯಾರ್ಥಿನಿ ರಕ್ಷಿತಾ ಪ್ರಾರ್ಥನೆ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಯಶೋಧರ ಕೆ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಅತಿಥಿ ಶಿಕ್ಷಕಿ ವಿಂದ್ಯಾಕೆ.

ಧನ್ಯವಾದ ಸಮರ್ಪಣೆ ಮಾಡಿದರು. ಸಹ ಶಿಕ್ಷಕರಾದ ಅಶೋಕ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಮಕ್ಕಳ ಪೋಷಕರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.