ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಚೊಕ್ಕಾಡಿಯಲ್ಲಿ ಸಮಾಲೋಚನಾ ಸಭೆ

0

ಬೆಳ್ಳಾರೆಯ ಗೌರಿಹೊಳೆಯ ತಟದಲ್ಲಿರುವ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಈ ಬಗ್ಗೆ ಭಕ್ತಾದಿಗಳ ಸಮಾಲೋಚನಾ ಸಭೆ ಜೂ. 8ರಂದು ಚೊಕ್ಕಾಡಿಯ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.

ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ದೇವಸ್ಥಾನದ ಇತಿಹಾಸದ ಬಗ್ಗೆ ಮಾತನಾಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಪಂಜಿಗಾರು ಮತ್ತು ಎರಡೂ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಕೆ.ವಿ.ಜಿ. ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲರಾದ ಬಾಲಕೃಷ್ಣ ಬೊಳ್ಳೂರು, ವಿಪತ್ತು ನಿರ್ವಹಣಾ ಘಟಕ ದೊಡ್ಡತೋಟ ಇದರ ಸಂಯೋಜಕ ವೆಂಕಟೇಶ್, ಸಹ ಸಂಯೋಜಕ ಪ್ರಸಾದ್ ಕೋಟೆಬನ, ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಕೇಶವ ಗೌಡ ಕರ್ಮಜೆ, ಮಾಧವ ಗೌಡ ಕಜೆಮೂಲೆ, ಕುಶಾಲಪ್ಪ ಗೌಡ ತಂಟೆಪ್ಪಾಡಿ, ವೆಂಕಟ್ರಮಣ ಟಿ.ಜಿ, ಅಮರಮುಡ್ನೂರು ಗ್ರಾ.ಪಂ. ಸದಸ್ಯೆ ಶ್ರೀಮತಿ ದಿವ್ಯ ಮಡಪ್ಪಾಡಿ, ವೆಂಕಟ್ರಮಣ ಇಟ್ಟಿಗುಂಡಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.