ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ

0

ಜೂನ್ 12 ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ಸುಳ್ಯ ಪೊಲೀಸ್ ಠಾಣೆಯಲ್ಲಿ ಇಂದು ಪ್ರತಿಜ್ಞಾವಿಧಿ ಬೋಧನೆ ನಡೆಯಿತು.


ಉಪನಿರೀಕ್ಷಕರಾದ ಸರಸ್ವತಿ ರವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಯಾವುದೇ ಸಂಘ ಸಂಸ್ಥೆಗಳಲ್ಲಿ ಬಾಲಕಾರ್ಮಿಕರು ಕೆಲಸ ನಿರ್ವಹಿಸುವುದನ್ನು ಕಂಡಲ್ಲಿ ತಕ್ಷಣ ಅವರಿಗೆ ತಿಳಿ ಹೇಳಿ ಅವರನ್ನು ಶಾಲೆಗೆ ಕಳುಹಿಸುವಬಗ್ಗೆ ಪೋಷಕರ ಗಮನಕ್ಕೆ ತರಲಾಗುವುದು, ಮತ್ತು ಕೆಲಸವನ್ನು ನೀಡಿದಂತಹ ಸಂಸ್ಥೆಯ ಮಾಲಕರಿಗೆ ಎಚ್ಚರಿಕೆಯನ್ನು ನೀಡುವ ಕಾರ್ಯ ಮಾಡಲಾಗುವುದು.

ಮತ್ತು ಮಕ್ಕಳಲ್ಲಿ ಶೈಕ್ಷಣಿಕ ವಿಷಯಗಳನ್ನು ಮನವರಿಕೆ ಮಾಡಿಕೊಳ್ಳಲಾಗುವುದು ಎಂಬಿತ್ಯಾದಿ ವಿಷಯಗಳನ್ನು ಆಧಾರಿತವಾಗಿ ಪ್ರಮಾಣವಚನ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಠಾಣೆಯ ಎಲ್ಲಾ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಗಳು ಪ್ರತಿಜ್ಞೆಯನ್ನು ಸ್ವೀಕರಿಸಿದರು.