ಕರ್ನಾಟಕ ಸರಕಾರ ಅಲ್ಪಸಂಖ್ಯಾತರ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಕೆಪಿಸಿಸಿ ಕಾರ್ಯದರ್ಶಿಯರಿಗೆ ಸನ್ಮಾನ

0

ಅಲ್ಪಸಂಖ್ಯಾತರ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಬೆಂಗಳೂರು ಕಚೇರಿಯಲ್ಲಿ ಕೆಪಿಸಿಸಿ ಪ್ರ.ಕಾರ್ಯದರ್ಶಿ ಟಿ ಎಮ್ ಶಹೀದ್ ತೆಕ್ಕಿಲ್ ಹಾಗೂ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತರ ರಾಜ್ಯ ಪ್ರಧಾನ‌ ಕಾರ್ಯದರ್ಶಿ ಕೆ ಎಂ ಮುಸ್ತಫಾ ಸುಳ್ಯ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅದ್ಯಕ್ಷರಿಗೆ ಕರ್ನಾಟಕ ಸರಕಾರ ಅಲ್ಪಸಂಖ್ಯಾತರ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಸಂಘದ ರಾಜ್ಯಾಧ್ಯಕ್ಷ ಮನ್ಸೂರ್ ಖಾನ್ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಈ ‌ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಸ್ಲಂ ಪಾಷ ,ಸುಳ್ಯ ನಗರ ಪಂಚಾಯತ್ ಸದಸ್ಯರುಗಳಾದ ಶರೀಪ್ ಕಂಠಿ ಸಿದ್ದೀಕ್‌ ಕೊಕ್ಕೊ, ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಿ ರಾಧಾಕೃಷ್ಣ ಬೊಳ್ಳೂರು ಮೊದಲದವರು ಉಪಸ್ಥಿತರಿದ್ದರು.