ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಾಳೆ ದಕ್ಷಿಣ ಕನ್ನಡ ಪ್ರವಾಸ

0

ಧರ್ಮಸ್ಥಳ,ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಮಾಜಿ ಮುಖ್ಯಮಂತ್ರಿ ಬಿ.ಯಸ್ ಯಡಿಯೂರಪ್ಪ ನಾಳೆ ಸಂಜೆ ಧರ್ಮಸ್ಥಳ ಭೇಟಿ ನೀಡಿ ಸೋಮವಾರ ಬೆಳಿಗ್ಗೆ ದೇವರ ದರ್ಶನ ಪಡೆಯಲಿದ್ದಾರೆ. ನಂತರ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಲಿದ್ದು ತುಲಾಭಾರ ಸೇವೆ ನೆರೆವೇರಿಸಲಿದ್ದಾರೆಂದು ತಿಳಿದುಬಂದಿದೆ. ಇದೇ ವೇಳೆ ಮಧ್ಯಾಹ್ನ 2 ಗಂಟೆಗೆ ಸುಳ್ಯ ನೂತನ ಬಿಜೆಪಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಂಗಳೂರು ತೆರಳಲಿದ್ದಾರೆಂದು ತಿಳಿದುಬಂದಿದೆ.