ಗೌರಿತಾಳಿಗೆ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪ್ರದಾನ

0

ಯೋಗ ಪಟು ಗೌರಿತಳಿಗೆ ರಾಷ್ಟ್ರ ಮಟ್ಟದ ಯೋಗ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂ. ೨೩ರಂದು ಕರ್ನಾಟಕ ಸಾಹಿತ್ಯ ಪರಿಷತ್ತು ಬೆಂಗಳೂರಿನ ಅಕ್ಕಮಹಾದೇವಿ ಸಭಾಭವನದಲ್ಲಿ ನಡೆಯಿತು.

ಬೆಳಕು ಸಾಹಿತ್ಯಿಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಆಯೋಜಿಸಿದ ೧೧೭ನೇ ಕಾರ್ಯ ಕ್ರಮ ರಾಷ್ಟ್ರ ಮಟ್ಟದ ಬೆಳಕು ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯ ಕ್ರಮ ದಲ್ಲಿ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕಿ ಶ್ರೀಮತಿ ಗೌರಿಶಂಕರ ಶೆಟ್ಟಿ, ಚಲನಚಿತ್ರ ನಿರ್ಮಾಪಕರಾದ ಶ್ರೀಮತಿ ಮಾಲತಿ ಗೌಡ, ಸಾಹಿತಿ ಡಾ.ನಿರ್ಮಲ, ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟ ಗೌಡ ಉಪಸ್ಥಿತರಿದ್ದರು. ಕಾರ್ಯ ಕ್ರಮದಲ್ಲಿ ಗೌರಿತಾ ಕೆ ಜಿ ಯೋಗ ನೃತ್ಯ ಪ್ರದರ್ಶನ ನೀಡಿದರು. ಇವರು ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ, ಡಾ. ಗೌತಮ್ ಮತ್ತು ಡಾ. ರಾಜೇಶ್ವರಿಯವರ ಪುತ್ರಿ .