ಕಂದ್ರಪ್ಪಾಡಿ ಹಿ. ಪ ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಬುಕ್ ವಿತರಣೆ

0

ಕಂದ್ರಪ್ಪಾಡಿ ಸರಕಾರಿ ಹಿರಿಯ ‌ಪ್ರಾಥಮಿಕ‌ ಶಾಲೆಯಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮ ವು ಇಂದು (ಜೂ.23) ನಡೆಯಿತು.

ಅವಿನಾಶ್ ಜಿ.ಎಸ್. ಹಾಗು ಶ್ರೀಮತಿ ಸ್ವಪ್ನಾ ಅವರು ಗ್ರಾಮೀಣ ಪರಿಸರದ ವಿದ್ಯಾರ್ಥಿಗಳ ಕಲಿಕೆಗೆ ಸಹಕಾ ರಿಯಾಗಬೇಕು ಎಂಬ ಸದುದ್ದೇಶದಿಂದ ಅವಿರತ ಪೌಂಡೇಶನ್ ಸಹಯೋಗದೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಕಾಳಿಕಾ ಪ್ರಸಾದ್ ಮುಂಡೋಡಿ ಆಡಳಿತ ಮೊಕ್ತೇಸರರು ಶ್ರೀ ರಾಜ್ಯ ದೈವ ಮತ್ತು ಪುರುಷದೈವ ಗಳ ದೈವಸ್ಥಾನ ಕಂದ್ರಪ್ಪಾಡಿ, ದಿವಾಕರ ಮುಂಡೋಡಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ದೇವಚಳ್ಳ, ಶ್ರೀಮತಿ ವನಸುಮ ಶಾಲೆಯ ಹಿರಿಯ ವಿದ್ಯಾರ್ಥಿಗಳು, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ವಾಣಿ ಎಂ. ವಿ, ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ವಾಣಿ ಕೆ. ಎಸ್., ಅಧ್ಯಾಪಕ ವೃಂದದವರು, ಶಾಲಾ ಎಸ್ ಡಿ ಎಂ ಸಿ ಸದಸ್ಯರುಗಳು, ಪೋಷಕರು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀಮತಿ ಸ್ವಪ್ನಾ ರವರು ಅವಿರತ ಫೌಂಡೇಶನ್ ನ ವತಿಯಿಂದ ನಡೆಯುವ ಸಮಾಜ ಮುಖಿ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕರಾದ ಅಜಯ ಕೆ.ಎಂ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಮುಖ್ಯಗುರುಗಳಾದ ಶ್ರೀಮತಿ ವಾಣಿ ಕೆ. ಎಸ್ ರವರು ದಾನಿಗಳಿಗೆ ಕೃತಜ್ಞತೆ ಸಲ್ಲಿಸಿ, ವಂದಿಸಿದರು.