ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮದ್ಯವರ್ಜನ ಶಿಬಿರದ ಆಮಂತ್ರಣ ಬಿಡುಗಡೆ

0

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಸುಳ್ಯ ತಾಲೂಕು ಬೆಳ್ಳಾರೆ ವಲಯ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸುಳ್ಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತ ಮತ್ತು ಸಂಶೋಧನ ಕೇಂದ್ರ ಲ್ಯಾಲ, ಉಜಿರೆ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಜಸ್ಟೀಸ್ ಕೆ. ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇವರ ಮಾರ್ಗದರ್ಶನದೊಂದಿಗೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ಳಾರೆ ವಲಯ ನವಜೀವನ ಸಮಿತಿಗಳು ಸುಳ್ಯ ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಊರಿನ ದಾನಿಗಳ ಸಹಕಾರದೊಂದಿಗೆ ಜು.02 ರಿಂದ ಜು.09 ರವರೆಗೆ ಜರಗುವ 1812ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಬಿಡುಗಡೆಯು ಜೂ.25 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.


ಬೆಳಿಗ್ಗೆ ದೇವಸ್ಥಾನ ಪ್ರಧಾನ ಅರ್ಚಕ ಉದಯಕುಮಾರ್ ಕೆ.ಟಿ.ಪೂಜಾ ಕಾರ್ಯ ನೆರವೇರಿಸಿದರು.


ಬಳಿಕ ಆಮಂತ್ರಣ ಪತ್ರ ಬಿಡುಗಡೆಗೊಳಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ 1812. ನೇ ಮದ್ಯವರ್ಜನಾ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್.ರೈ, ಗೌರವಾಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತುರವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು.
ಬಳಿಕ ಸಭಾಭವನದಲ್ಲಿ ಶಿಬಿರದ ಪೂರ್ವತಯಾರಿ ಬಗ್ಗೆ ಸಭೆ ನಡೆಯಿತು.


ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡರವರು ಸ್ವಾಗತಿಸಿ,ಶಿಬಿರ ಯಶಸ್ವಿಯಾಗಿ ನಡೆಯಲು ಪೂರ್ವ ತಯಾರಿ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಚಂದ್ರಶೇಖರ ಪನ್ನೆ,ಪ್ರಮೋದ್ ಶೆಟ್ಟಿ ಕುಂಟುಪುಣಿಗುತ್ತು, ವಿಠಲದಾಸ್ ಎನ್.ಎಸ್.ಡಿ, ಶ್ರೀಮತಿ ಅನುಸೂಯ ಪೆರುವಾಜೆ,ಗೌರವ ಸಲಹೆಗಾರರಾದ ವಿಶ್ವನಾಥ ರೈ ಕಳಂಜ, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಆನಂದ ಗೌಡ ಪೆರಿಯಾಣ, ಸದಸ್ಯ ಪದ್ಮನಾಭ ಜೈನ್, ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ವಿಶಾಲ ಕೆ,ರಾಮ ಯು.ಪೆರುವಾಜೆ, ಒಕ್ಕೂಟದ ವಲಯಾಧ್ಯಕ್ಷೆ ವೇದ ಶೆಟ್ಟಿ, ಅಧ್ಯಕ್ಷ ಸುಂದರ ನಾಯ್ಕ,ಕೊಡಿಯಾಲ ಒಕ್ಕೂಟದ ಅಧ್ಯಕ್ಷ ಗೋವರ್ಧನ ,ಅಮರಪಡ್ನೂರು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೀಣಾ,ಒಕ್ಕೂಟದ ಕಾರ್ಯದರ್ಶಿ ಸುಂದರಿ ಹಾಗೂ ವಲಯದ ಸೇವಾ ಪ್ರತಿನಿಧಿಗಳು ಶೌರ್ಯ ವಿಪತ್ತು ತಂಡದ ನಾರಾಯಣ ನಾಯ್ಕ,ಸುಂದರ ನಾಯ್ಕ,ರಮೇಶ್ ನಾಯ್ಕ್ ವಿಪತ್ತು ಘಟಕದ ಸಂಯೋಜಕರು
, ದೇವಸ್ಥಾನದ ಕಚೇರಿ ನಿರ್ವಾಹಕ ಮಹೇಶ್ ಕಲ್ಪಣೆ ಮತ್ತಿತರರು ಉಪಸ್ಥಿತರಿದ್ದರು.