ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಾಧಿಕಾರ ರಚನೆಗೆ ವಿರೋಧ

0

ಸುಬ್ರಹ್ಮಣ್ಯಕ್ಕೆ ಬಂದ ಡಿ.ಕೆ.ಶಿ.ಗೆ ಕಾಂಗ್ರೆಸ್ ಕಾರ್ಯಕರ್ತರ ಒತ್ತಡ

ಪ್ರಾಧಿಕಾರ ರಚನೆಗೆ ಕಾರ್ಯಕರ್ತರ ವಿರೋಧವಿದೆ. ಕ್ಯಾಬಿನೆಟ್ ನಲ್ಲಿ ಮಾತನಾಡುತ್ತೇನೆ : ಡಿ.ಕೆ ಶಿವಕುಮಾರ್

ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಪ್ರಾಧಿಕಾರ ರಚನೆ ಮಾಡುವ ನಿರ್ಧಾರ ಕ್ಕೆ ವಿರೋಧ ವ್ಯಕ್ತವಾಗಿದ್ದು ಪ್ರಾಧಿಕಾರ ರಚನೆಯ ಬಗ್ಗೆ ಇಲ್ಲಿನವರೊಂದಿಗೆ ಚರ್ಚಿಸಿ ಕ್ಯಾಬಿನೆಟ್ ನಲ್ಲಿ ಮಾತನಾಡುತ್ತೇನೆ ಕ್ರಮ ಕೈಗೊಳ್ಳುವುದಾಗಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಅವರು ಸುಬ್ರಹ್ಮಣ್ಯದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ ಮಾತನಾಡುತಿದ್ದರು. ಪ್ರಾಧಿಕಾರ ರಚನೆಯ ಪ್ರಸ್ತಾಪ ಆಗಿರುವುದು ನಿಜ. ಆದರೆ ಅದರ ಸಾಧ್ಯತೆಗಳಿಗೆ ಇಲ್ಲಿನವರ ವಿರೋಧವಿದ್ದು ಸಮಾಲೋಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. ಇದಲ್ಲದೆ ಸುಬ್ರಹ್ಮಣ್ಯ ಕಾಂಗ್ರೆಸ್ ನಾಯಕರಿದ್ದು ಕಾಂಗ್ರೆಸ್ ಪಕ್ಷದ ಸಭೆ ನಡೆಸಿದ ಡಿ.ಕೆ.ಶಿ ಅವರು ತಮ್ಮ ಪಕ್ಷದ ನಾಯಕರ ಮತ್ತು ಕಾರ್ಯಕರ್ತರ ಅಭಿಪ್ರಾಯ ಪಡೆದಿದ್ದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಾಧಿಕಾರ ರಚನೆ ಕೈ ಬಿಡಬೇಕಾಗಿ ಪಕ್ಷದ ವತಿಯಿಂದ ಕೇಳಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಡಿ.ಕೆ.ಶಿ ಅವರು ಪ್ರಾಧಿಕಾರ ರಚನೆ ವಿಷಯ ಕೈ ಬಿಡಲು ಒಳವು ತೋರಿಸಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.