ರೂಂ ಬಾಯ್ ನ್ನು ಎಳೆದು ಹಾಕಿದ ಆನೆ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಘಟನೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ವರದಿಯಾಗಿದೆ.

ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿ.ಕೆ.ಶಿ ಯವರನ್ನು ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು. ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಪೋಟೋ ತೆಗೆಯಲು ಬಂದಿದ್ದರು.

ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್ ಒಂದರ ರೂಂ ಬಾಯ್ ಆನೆಯ ಹತ್ತಿರ ಬಂದಿದ್ದು ತಕ್ಷಣ ಆನೆ ತನ್ನ ಸೊಂಡಿಲಿನಿಂದ ಎಳೆದು ಹಾಕಿರುವುದಾಗಿ ತಿಳಿದು ಬಂದಿದೆ. ರೂಂ ಬಾಯ್ ಮದ್ಯಪಾನ ಮಾಡಿರುವುದೇ ಘಟನೆ ಕಾರಣ ಎನ್ನಲಾಗಿದ್ದು ಯಾವುದೇ ತೊಂದರೆ ಆಗಿಲ್ಲ ಎನ್ನಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿಗೆ ಕೆಲವೇ ಸಮಯದ ಮೊದಲು ಈ ಘಟನೆ ನಡೆಯಿತು.

*