ಜು.7: ಸುಳ್ಯದಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

0

ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಸರಸ್ವತಿ ಕ್ರೆಡಿಟ್ ಸಹಕಾರಿ ಸಂಘ ನಿ.ನೇತೃತ್ವದಲ್ಲಿ ಸುಳ್ಯ ಭಾಲಾವಲಿಕಾರ್ ರಾಜಾಪುರ ಸಾರಸ್ವತ ಸಮಾಜ ಮತ್ತು ಯುವ ಸಮಾಜ,ದುರ್ಗಾಪರಮೇಶ್ವರಿ ಭಜನಾ ಮಂಡಳಿ ಮತ್ತು ಮಹಿಳಾ ಮಂಡಳಿ, ದುರ್ಗಾಪರಮೇಶ್ವರಿ ಚಾರಿಟೇಬಲ್ ಟ್ರಸ್ಟ್ ಹಾಗೂ ಎ.ಜೆ.ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ದಿ.ಉಪೇಂದ್ರ ಅನಂತ ಕಾಮತ್ ರವರ ಸ್ಮರಣಾರ್ಥವಾಗಿ
ಜು.7 ರಂದು ಸುಳ್ಯದ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರವು ನಡೆಯಲಿರುವುದು.

ತಾಲೂಕು ಆರೋಗ್ಯಾಧಿಕಾರಿ ಡಾ|ನಂದಕುಮಾರ್ ಬಿ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ಆರ್.ಗೋಪಾಲಕೃಷ್ಣ ಅಧ್ಯಕ್ಷತೆವಹಿಸಲಿರುವರು.
ಶಿಬಿರದಲ್ಲಿ ಉಚಿತ ಔಷಧಿ ವಿತರಣೆ, ಉಚಿತ ಕನ್ನಡಕ ವಿತರಣೆ, ಸಾಮಾನ್ಯ ಆರೋಗ್ಯ ತಪಾಸಣೆ, ಮಧುಮೇಹ ತಪಾಸಣೆ ಹಾಗೂ ಕಿವಿ,ಮೂಗು ಗಂಟಲು ತಜ್ಞರು, ಕಣ್ಣಿನ ತಜ್ಞರು ಮತ್ತು ಎಲುಬು ಮತ್ತು ಕೀಲು ತಜ್ಞರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.