ಬೆಳ್ಳಾರೆಯಲ್ಲಿ 1812ನೇ ಮದ್ಯವರ್ಜನ ಶಿಬಿರ ನವಜೀವನ ಸದಸ್ಯರ ಅನಿಸಿಕೆ ಕಾರ್ಯಕ್ರಮ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಹತ್ತಾರು ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೆಳ್ಳಾರೆಯ ಶ್ರೀ ಮಹಾಲಿಂಗೇಶ್ವರ ಸಭಾ ಭವನದಲ್ಲಿ ನಡೆಯುತ್ತಿರುವ 1812ನೇ ಮದ್ಯವರ್ಜನ ಶಿಬಿರದ 3ನೇ ದಿನವಾದ ಜು. 4ರಂದು ಬೆಳಿಗ್ಗೆ ನವಜೀವನದ ಸದಸ್ಯರ ಅನಿಸಿಕೆ ನಡೆಯಿತು.

ಶಿಬಿರಾಧಿಕಾರಿ ನಂದಕುಮಾರ್ ಕಾರ್ಯಕ್ರಮ ನಡೆಸಿಕೊಟ್ಟರು. ಶ್ರೀರಾಮ ನವಜೀವನ ಸಮಿತಿ ಕಾಂತಮಂಗಲ ಮತ್ತು ಶ್ರೀ ವಿಷ್ಣು ಜನಜೀವನ ಸಮಿತಿ ಕಲ್ಲಡ್ಕ ಇದರ ಸದಸ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಸುಮಾರು 75 ಶಿಬಿರಾರ್ಥಗಳು ಭಾಗವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಮತ್ತು ಸಿಬ್ಬಂದಿಗಳು, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯ.ಸ. ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಶಿಬಿರದ ಸಂಯೋಜಕರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿ ವರ್ಗದವರು, ಸಿಬ್ಬಂದಿಗಳು, ಶಿಬಿರಾರ್ಥಿಗಳ ಮನೆಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.