ಪಂಜ: ಶ್ರೀ ಶಾರದಾಂಬಾ ಭಜನಾ ಮಂಡಳಿಯ ಮಹಾಸಭೆ

0

ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿ ಇದರ ವಾರ್ಷಿಕ ಮಹಾಸಭೆ ಜು.4 ರಂದು ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು.


ಭಜನಾ ಮಂಡಳಿಯ ಉಪಾಧ್ಯಕ್ಷ ಪರಮೇಶ್ವರ ಬಿಳಿಮಲೆ ಸಭಾಧ್ಯಕ್ಷತೆ ವಹಿಸಿದ್ದರು. ಭಜನಾ ಮಂಡಳಿ ಅಧ್ಯಕ್ಷ ಬಾಲಕೃಷ್ಣ ಪುತ್ಯ, ನೂತನ ಅಧ್ಯಕ್ಷ. ನಾಗಪ್ಪ ಗೌಡ ಪಂಜದಬೈಲು, ಕಾರ್ಯದರ್ಶಿ ಗುರು ಪ್ರಸಾದ್ ತೋಟ ‌, ಖಜಾಂಜಿ ಲೋಕೇಶ್ ಬರೆಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ವಿವಿಧ ಸಮಿತಿಗಳ ಸಂಚಾಲಕರ ಆಯ್ಕೆ ನಡೆಯಿತು.ಮುಂದಿನ ಕಾರ್ಯಕ್ರಮಗಳ ಕುರಿತು ನಿರ್ಣಾಯಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ಯಾಮ ಕೃಷ್ಣನಗರ ಪ್ರಾರ್ಥಿಸಿದರು. ಪರಮೇಶ್ವರ ಬಿಳಿಮಲೆ ಸ್ವಾಗತಿಸಿದರು. ಬಾಲಕೃಷ್ಣ ಪುತ್ಯ ಲೆಕ್ಕಪತ್ರ ಮಂಡನೆ ಮಾಡಿದರು.ಗುರುಫ್ರಸಾದ್ ತೋಟ ನಿರೂಪಿಸಿದರು. ಲೋಕೇಶ್ ಬರೆಮೇಲು ವಂದಿಸಿದರು.