ಬೆಳ್ಳಾರೆ ಮದ್ಯವರ್ಜ‌ನ ಶಿಬಿರಕ್ಕೆ ಬೆಳ್ಳಾರೆ ರೋಟರಿ ಕ್ಲಬ್ ವತಿಯಿಂದ ಧನಸಹಾಯ ಹಸ್ತಾಂತರ

0

ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಮದ್ಯವರ್ಜನ ಶಿಬಿರಕ್ಕೆ ಬೆಳ್ಳಾರೆ ರೋಟರಿ ಕ್ಲಬ್ ವತಿಯಿಂದ ಧನಸಹಾಯ ಹಾಗೂ ಒಂದು ಕ್ವಿಂಟಾಲ್ ಅಕ್ಕಿಯನ್ನು ನೀಡಲಾಯಿತು.


ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ರೈಯವರು ದೇವಸ್ಥಾನದ ವ್ಯ.ಸ.ಅಧ್ಯಕ್ಷ ಹಾಗೂ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತುರವರಿಗೆ ಧನಸಹಾಯ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರೊ.ಎ.ಕೆ.ಮಣಿಯಾಣಿ,ರೊ.ರವೀಂದ್ರ ಗೌಡ ಮರಕ್ಕಡ,ರೊ.ಪ್ರಮೋದ್ ಶೆಟ್ಟಿ ಕುಂಟುಪುಣಿಗುತ್ತು ,ರೊ.ಬಾಲಕೃಷ್ಣ ಮಡ್ತಿಲ , ಶಿಬಿರಾಧಿಕಾರಿ ನಂದ ಕುಮಾರ್, ಗ್ರಾ.ಯೋಜನೆಯ ಒಕ್ಕೂಟದ ಪದಾಧಿಕಾರಿಗಳು,ಸೇವಾನಿತರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.