ಸುಬ್ರಹ್ಮಣ್ಯ: ಅಸೌಖ್ಯದಿಂದ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಗಾಗಿ ಮನವಿ

0

ಇತ್ತೀಚೆಗೆ ಸುಬ್ರಹ್ಮಣ್ಯ ದ ವನದುರ್ಗಾ ದೇವಿ ದೇವಸ್ಥಾನದ ಬಳಿ ಅಸೌಖ್ಯಗೊಂಡು ಮಲಗಿದ್ದ ವ್ಯಕ್ತಿಯೋರ್ವರನ್ನು ಸ್ಥಳೀಯರ ಸಹಾಯದಿಂದ ಆಂಬುಲೆನ್ಸ್ ಮೂಲಕ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೆ ಜು.5 ರಂದು ಮೃತರಾದರು.
ಮೃತರಾದ ವ್ಯಕ್ತಿಯು ಕುಂದಾಪುರ ಮೂಲದ ಚಂದ್ರ ಎಂದು ಹೇಳಿಕೊಂಡು ಸುಬ್ರಹ್ಮಣ್ಯ ಪರಿಸರದಲ್ಲಿ ಕಳೆದ 10-12 ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ.ಆದರೆ ಇವರ ಬಗ್ಗೆ ಹೆಚ್ಚಿನ ವಿವರಗಳು ತಿಳಿದಿಲ್ಲ.ಆದುದರಿಂದ ಇವರ ಬಗ್ಗೆ ತಿಳಿದವರು, ಕುಟುಂಬಸ್ಥರು ಅಥವಾ ವಾರಸುದಾರರು ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ಸಂಪರ್ಕಿಸಬೇಕಾಗಿ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.