ದ.ಕ. ತೆಂಗು ರೈತ ಉತ್ಪಾದಕ ಸಂಸ್ಥೆಗೆ ಚಿತ್ತಾರ ಸ್ಟಾರ್ ಅವಾರ್ಡ್

0

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯು ಚಿತ್ತಾರ ಸ್ಟಾರ್ ಅವಾರ್ಡ್ ಗೆ ಭಾಜನವಾಗಿದ್ದು ಜು.7 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಶ್ರೀ ರಾಮನ ವಿಗ್ರಹವನ್ನು ಕೆತ್ತಿದ ಶಿಲ್ಪಿ ಅರುಣಾ ಯೋಗಿರಾಜ್ ರವರು ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್.ಕೆ ಯವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಸಂಸ್ಥೆಯ ಉಪಾಧ್ಯಕ್ಷ ಗಿರಿಧರ ಸ್ಕಂದ, ಮುಖ್ಯ ಸಲಹೆಗಾರ ಯತೀಶ್ ಜತೆಯಲ್ಲಿದ್ದರು.