ಸುಳ್ಯ ಸಿದ್ಧಿವಿನಾಯಕ ಸೇವಾಸಮಿತಿ, ಸಾರ್ವಜನಿಕ ದೇವತಾರಾಧನಾ ಸಮಿತಿ ವಾರ್ಷಿಕ ಮಹಾಸಭೆ

0

ನೂತನ ಪದಾಧಿಕಾರಿಗಳ ಆಯ್ಕೆ:ಅಧ್ಯಕ್ಷ-ದಿನೇಶ್ ಕುಮಾರ್ ಕೆ.ಸಿ, ಪ್ರ.ಕಾರ್ಯದರ್ಶಿ- ಭರತ್ ಪಿ.ಯು, ಕೋಶಾಧಿಕಾರಿ- ಶಿವರಾಮ ಕೆ

ಸುಳ್ಯ ಶ್ರೀ ಸಿದ್ಧಿವಿನಾಯಕ ಸೇವಾಸಮಿತಿ,ಸಾರ್ವಜನಿಕ ದೇವತಾರಾಧನಾ ಸಮಿತಿ ಇದರ ವಾರ್ಷಿಕ ಮಹಾಸಭೆಯು ಕಸ್ತೂರಿ ನರ್ಸರಿ ಮಾಲಕ ಮಧುಸೂದನ್ ಕುಂಭಕೋಡು ರವರ ಓಡಬಾಯಿ ಮನೆಯಲ್ಲಿ ಸಿದ್ಧಿವಿನಾಯಕ ಸೇವಾ ಸಮಿತಿ ಅಧ್ಯಕ್ಷ ಸೋಮನಾಥ ಪೂಜಾರಿ ಯವರ ಅಧ್ಯಕ್ಷತೆಯಲ್ಲಿ ಜು.8 ರಂದು ನಡೆಯಿತು.

2022-23 ನೇ ಸಾಲಿನ ಅಯ ವ್ಯಯಗಳ ಲೆಕ್ಕ ಪತ್ರವನ್ನು ಕೋಶಾಧಿಕಾರಿ ಮಂಡಿಸಿದರು.
ಈ ಸಂದರ್ಭದಲ್ಲಿ ಮುಂದಿನ ಸಾಲಿನ ನೂತನ ಪದಾಧಿಕಾರಿಗಳ ನ್ನು ಆಯ್ಕೆ ಮಾಡಲಾಯಿತು.
ಸಿದ್ಧಿವಿನಾಯಕ ಸೇವಾ ಸಮಿತಿಅಧ್ಯಕ್ಷರಾಗಿ ದಿನೇಶ್ ಕುಮಾರ್ ಕೆ.ಸಿ ಸುಳ್ಯ, ಪ್ರಧಾನ ಕಾರ್ಯದರ್ಶಿ ಭರತ್ ಪಿ.ಯು, ಕೋಶಾಧಿಕಾರಿ ಶಿವರಾಮ ಕೇರ್ಪಳ ರವರನ್ನು ಹಾಗೂ
ಮಹಿಳಾ ಘಟಕದ ಅಧ್ಯಕ್ಷೆಯಾಗಿ ಶ್ರೀಮತಿ ಲತಾ ಮಧುಸೂದನ್, ಕಾರ್ಯದರ್ಶಿ ಮಮತಾ ಶೆಣೈ ಯವರನ್ನು ಆಯ್ಕೆ ಮಾಡಲಾಯಿತು.

ಸಾರ್ವಜನಿಕ ದೇವತಾರಾಧನಾ ಸಮಿತಿ ಅಧ್ಯಕ್ಷ ಪಿ.ಕೆ.ಉಮೇಶ್, ಕಾರ್ಯದರ್ಶಿ ಶಶಿಧರ ಎಂ.ಜೆ ಕೊಯಿಕುಳಿ, ಜಿ.ಜಿ.ನಾಯಕ್ ಸುಳ್ಯ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಂದಿನ ಸೆಪ್ಟೆಂಬರ್ ತಿಂಗಳಲ್ಲಿ ಗಣೇಶೋತ್ಸವ ನಡೆಯಲಿದ್ದು ಇದರ ಪೂರ್ವ ಭಾವಿ ತಯಾರಿಯ ಕುರಿತು ವಿಚಾರ ವಿಮರ್ಶೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಂಟಿ ಸಮಿತಿಯ ಹಿರಿಯ ಕಿರಿಯ ಸದಸ್ಯರು ಭಾಗವಹಿಸಿದರು.