ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣರ ಮನೆಗೆ ಅಕಾಡೆಮಿ ನೂತನ ತಂಡ ಭೇಟಿ

0

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾದ ಸದಾನಂದ ಮಾವಜಿ ಹಾಗೂ ಅಕಾಡೆಮಿಯ ಸದಸ್ಯರು ಜು.9ರಂದು ಪೂರ್ವಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆಯವರನ್ನು ಅವರ ಮನೆಯಲ್ಲಿ ಸೌಹಾರ್ದ ಭೇಟಿ ಮಾಡಿ ಮಾತುಕತೆ ನಡೆಸಿದರು.


ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಹಾಗೂ ನೂತನ ಸದಸ್ಯರ ತಂಡವನ್ನು ಕಜೆಗದ್ದೆಯವರು ಅಭಿನಂದಿಸಿದರು ಹಾಗೂ ತಂಡದೊಂದಿಗೆ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಿದರು.
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಸದಸ್ಯರುಗಳಾದ ಚಂದ್ರಶೇಖರ್ ಪೇರಾಲು, ಶ್ರೀಮತಿ ಚಂದ್ರಾವತಿ ಬಡ್ಡಡ್ಕ, ಶ್ರೀಮತಿ ಲತಾ ಕುದ್ಪಾಜೆ, ಡಾ| ಎನ್.ಎ ಜ್ಞಾನೇಶ್ ಉಪಸ್ಥಿತರಿದ್ದರು.