ಗುತ್ತಿಗಾರು: ಬಸ್ ತಂಗುದಾಣದಲ್ಲಿದ್ದ ಕುಡುಕರನ್ನು ಓಡಿಸಲು ಬಂದ ಪೋಲಿಸರೇ ಕುಡಿದು ಬಂದರೇ ?

0

ಗುತ್ತಿಗಾರಿನ ಬಸ್ ನಿಲ್ದಾಣದಲ್ಲಿ ಮದ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವರನ್ನು ಅಲ್ಲಿಂದ ಓಡಿಸಲು ಬಂದ ಪೋಲೀಸರೇ ಕುಡಿದು ಬಂದಿದ್ದರೆಂದು ಸಾರ್ವಜನಿಕರಿಗೆ ಅನುಮಾನ ಬಂದು ಅವರನ್ನು ಪ್ರಶ್ನಿಸಿದ ಘಟನೆ ಗುತ್ತಿಗಾರಿನಿಂದ ವರದಿಯಾಗಿದೆ.

ಜು.10 ರಂದು ಗುತ್ತಿಗಾರು ಬಸ್ ನಿಲ್ದಾಣದಲ್ಲಿ ಕುಡಿದು ಮಲಗಿದ್ದವರಿಂದ ತೊಂದರೆ ಆಗುತ್ತಿರುವುದನ್ನು ಮಹಿಳೆಯೊಬ್ಬರು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಗೆ ಕರೆಮಾಡಿ ದೂರು ಹೇಳಿದ್ದರು. ಬಸ್ ನಿಲ್ದಾಣದಲ್ಲಿದ್ದ ಆ ಕುಡುಕರು ಅಲ್ಲಿ ಬಾಟಲಿ ಒಡೆದು ಕುಪ್ಪಿ ಚೂರುಗಳನ್ನು ಚೆಲ್ಲಿದ್ದರಿಂದ ಸಾರ್ವಜನಿಕರಿಗೆ ತುಂಬ ತೊಂದರೆಯಾಗತೊಡಗಿತ್ತು.

ಮಹಿಳೆಯ ಕರೆಯ ಆಧಾರದಲ್ಲಿ ಹೊಯ್ಸಳ ಪೋಲಿಸರು ಗುತ್ತಿಗಾರಿಗೆ ಬಂದಿದ್ದು, ಅವರಿಗೆ ಕುಡುಕರನ್ನು ಗದರಿಸದೆ ಕುಳಿತುದನ್ನು ಕಂಡು ಸಾರ್ವಜನಿಕರು ಅನುಮಾನಗೊಂಡರು. ಪೊಲೀಸರೇ ಕುಡಿದು ಬಂದಿದ್ದಾರೆಂದು ತಿಳಿದುಕೊಂಡ ಸಾರ್ವಜನಿಕರು ಮೊಬೈಲ್ ನಲ್ಲಿ ಪೋಲೀಸರ ಚಲನವಲನವನ್ನು ಸೆರೆ ಹಿಡಿದಿದರೆನ್ನಲಾಗಿದೆ. ಕೆಲವು ಮಂದಿ ನೇರವಾಗಿ ಪೋಲೀಸರನ್ನು ಈ ಬಗ್ಗೆ ಪ್ರಶ್ನಿಸಿ, ಅದನ್ನು ವೀಡಿಯೋ ಮಾಡಿಕೊಂಡರು.

ಆ ವೀಡಿಯೋ ಈಗ ವೈರಲ್ ಆಗಿದ್ದು ಎಸ್. ಪಿ. ಯವರಿಗೆ ಮುಟ್ಟಿರುವುದಾಗಿ ಹೇಳಲಾಗುತ್ತಿದೆ.