ಪಂಜ: ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ ಅವರಿಗೆ ಗೌರವಾರ್ಪಣೆ

0

ಜು. 31ರಂದು ವಯೋನಿವೃತ್ತಿ ಹೊಂದಲಿರುವ‌ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಬಿ.ಇ ರವರನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವತಿಯಿಂದ ಜು. 16ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಜರುಗಿದ ವಾರ್ಷಿಕ ಮಹಾಸಭೆ ಮತ್ತು ಮಾಹಿತಿ ಕಾರ್ಯಾಗಾರದಲ್ಲಿ ಅಭಿವಂದಿಸಿ ಸನ್ಮಾನಿಸಲಾಯಿತು.

ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ.ಕೆ ಗೌರವಿಸಿದರು. ಕಾರ್ಯದರ್ಶಿ ಉದಯಕುಮಾರ್ ರೈ ಬಾಳಿಲ ಶುಭಾಶಂಸನೆಗೈದರು.


ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಸ್ಕೌಟ್ ಆಯುಕ್ತರಾದ ಮಹಮ್ಮದ್ ತುಂಬೆ, ಜಿಲ್ಲಾ ಗೈಡ್ ಆಯುಕ್ತರಾದ ವಿಮಲಾ ರಂಗಯ್ಯ, ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್, ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ, ಶಿಕ್ಷಣ ಸಂಯೋಜಕಿ ಸಂಧ್ಯಾಕುಮಾರಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜಯಂತ ಕೆ, ಪಂಜ ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ವಾಸುದೇವ ನಡ್ಕ, ಉಪಾಧ್ಯಕ್ಷರಾದ ಸೋಮಶೇಖರ, ಬಾಲಕೃಷ್ಣ ರೈ ಬಿರ್ಕಿ, ದಾಮೋಧರ ನೆರಳ ಹಾಗೂ ಸ್ಕೌಟ್ ಗೈಡ್ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.