ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಅಹ್ವಾನ

0

ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ.

ಕಳೆದ ಮಾರ್ಚ್ 4 ರಿಂದ ಆಡಳಿತಾಧಿಕಾರಿ ಅವರ ಆಡಳಿತದಲ್ಲಿರುವ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿ ರಚಿಸಲು ಆದೇಶ ಹೊರಡಿಸಲಾಗಿದ್ದು ಆ.3 ರ ಮೊದಲಾಗಿ ಅರ್ಜಿ ಸಲ್ಲಿಸುವಂತೆ ಸುತ್ತೋಲೆ ಹೊರಬಿದ್ದಿದೆ.

ಇದರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಾಧಿಕಾರ ರಚನೆ ಪ್ರಸ್ತಾಪ ಆತಂಕ ದೂರವಾಗಿದ್ದು ಕಾಂಗ್ರೆಸ್ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ. ಅಲ್ಲದೆ ಕಾಂಗ್ರೆಸ್ ನ ವತಿಯಿಂದ ಇತ್ತೀಚೆಗೆ ನಿಯೋಗವೊಂದು ತೆರಳಿ ನಾಯಕರುಗಳ ಮನ ವೊಲಿಸಿರುವುದು ಫಲ ನೀಡಿದೆ.